ತಹವ್ವೂರ್ ರಾಣಾ 
ದೇಶ

ದೆಹಲಿಗೆ ಬಂದಿಳಿದ ತಹವ್ವೂರ್ ರಾಣಾ; ಮುಂಬೈ ದಾಳಿಯ ಉಗ್ರನನ್ನು ವಶಕ್ಕೆ ಪಡೆದ NIA

ರಾಣಾ ಹೊತ್ತ ವಿಮಾನವು ಇಂದು ಮಧ್ಯಾಹ್ನ 2:50 ರ ಸುಮಾರಿಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ನವದೆಹಲಿ: ಅಮೆರಿಕದಿಂದ ಗಡಿಪಾರಾಗಿರುವ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಗುರುವಾರ ದೆಹಲಿಗೆ ಬಂದಿಳಿದಿದೆ ಎಂದು ಮಾಧ್ಯಮ ವರದಿಗಳು ವರದಿ ಮಾಡಿವೆ.

ರಾಣಾ ಹೊತ್ತ ವಿಮಾನವು ಇಂದು ಮಧ್ಯಾಹ್ನ 2:50 ರ ಸುಮಾರಿಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ರಾಣಾನನ್ನು ಈಗ NIA ಔಪಚಾರಿಕವಾಗಿ ಬಂಧಿಸಿದ್ದು, ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಹಾಜರುಪಡಿಸಲಿದೆ.

ನ್ಯಾಯಾಲಯದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ, ಅಲ್ಲಿ ರಾಣಾನನ್ನು ಇಂದು ಹಾಜರುಪಡಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯಾಯಾಲಯದ ಹೊರಗೆ ಅರೆಸೈನಾ ಪಡೆಗಳು ಮತ್ತು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸಂದರ್ಶಕರ ಸಂಪೂರ್ಣ ದೈಹಿಕ ತಪಾಸಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ರಾಣಾನನ್ನು ಹೆಚ್ಚಿನ ಭದ್ರತೆಯ ಜೈಲು ವಾರ್ಡ್‌ನಲ್ಲಿ ಇರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಮತ್ತು ನ್ಯಾಯಾಲಯದ ಆದೇಶಗಳಿಗಾಗಿ ಕಾಯುತ್ತಿದ್ದೇವೆ ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ, ಕೇಂದ್ರವು ವಕೀಲ ನರೇಂದರ್ ಮಾನ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪ್ರಕರಣದ RC-04/2009/NIA/DLI (ಮುಂಬೈ ದಾಳಿಗಳು) ಪ್ರಕರಣದ ವಿಚಾರಣೆ ಮತ್ತು ಇತರ ವಿಷಯಗಳಿಗೆ ಮೂರು ವರ್ಷಗಳ ಕಾಲ ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ನೇಮಿಸಿದೆ.

64 ವರ್ಷದ ರಾಣಾ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ಮತ್ತು 2008 ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿ ಅವರ ನಿಕಟವರ್ತಿಯಾಗಿದ್ದಾರೆ.

2008 ರ ಮುಂಬೈ ದಾಳಿಯ ಪ್ರಮುಖ ಆರೋಪಿ ರಾಣಾ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದರಿಂದ ಗಡಿಪಾರುನಿಂದ ತಪ್ಪಿಸಿಕೊಳ್ಳುವ ಕೊನೆಯ ಯತ್ನ ವಿಫಲವಾದ ನಂತರ ಗುರುವಾರ ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್