ಕಂಗನಾ ರನೌತ್  
ದೇಶ

ಕಂಗನಾ ಡೈಲಾಗ್ ಹೊಡೀತಾರೆ, ಯಾರೂ ಗಂಭೀರವಾಗಿ ಪರಿಗಣಿಸಬೇಡಿ: ಹಿಮಾಚಲ ಸಚಿವ

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿದ ಚೌಹಾಣ್ ಅವರು, "ನೀವು ಬಾಕಿ ಬಿಲ್ ಪಾವತಿಸದಿದ್ದರೆ, ಇದೇ ರೀತಿ ದಂಡ ವಿಧಿಸಲಾಗುತ್ತದೆ ಮತ್ತು ಇನ್ನೂ ಹೆಚ್ಚಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಸಂಸದೆ ಕಂಗನಾ ರನೌತ್ ಅವರು ನಟಿಯಂತೆ ಮಾತನಾಡುತ್ತಾರೆ ಮತ್ತು ಅವರನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ರಾಜ್ಯ ಕೈಗಾರಿಕಾ ಸಚಿವ ಹರ್ಷವರ್ಧನ್ ಚೌಹಾಣ್ ಶುಕ್ರವಾರ ಹೇಳಿದ್ದಾರೆ.

ಕಂಗನಾ ಇತ್ತೀಚೆಗೆ ತಮ್ಮ ಮನಾಲಿ ಮನೆಗೆ 1 ಲಕ್ಷ ರೂ. ವಿದ್ಯುತ್ ಬಿಲ್‌ ಕಳಿಸಿದ್ದಾರೆ. ಜನ ಮತ್ತು ಉದ್ಯಮ ವಿದ್ಯುತ್ ಬಿಲ್‌ಗಳಿಂದ ತತ್ತರಿಸಿದ್ದಾರೆ ಎಂದು ಹೇಳಿದ್ದರು.

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿದ ಚೌಹಾಣ್ ಅವರು, "ನೀವು ಬಾಕಿ ಬಿಲ್ ಪಾವತಿಸದಿದ್ದರೆ, ಇದೇ ರೀತಿ ದಂಡ ವಿಧಿಸಲಾಗುತ್ತದೆ ಮತ್ತು ಇನ್ನೂ ಹೆಚ್ಚಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

"ಅವರು ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಸಂಚಲನ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಅದು ಅವರ ಹಳೆಯ ಅಭ್ಯಾಸ. ಆದರೆ ಈಗ ಅವರು ರಾಜಕಾರಣಿ ಮತ್ತು ಕೆಲವು ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಬೇಕು" ಎಂದಿದ್ದಾರೆ.

ಕಂಗನಾ ಅವರಿಗೆ ಮಂಡಿ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಜವಾಬ್ದಾರಿ ನೀಡಲಾಗಿದೆ ಮತ್ತು ಅವರು ಅನಗತ್ಯ ಹೇಳಿಕೆ ನೀಡುವ ಬದಲು ಜನರ ನಿರೀಕ್ಷೆಗಳಿಗೆ ತಕ್ಕಂತೆ ನಡೆದು ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಚೌಹಾಣ್ ತಿರುಗೇಟು ನೀಡಿದ್ದಾರೆ.

"ಅವರು ಡೈಲಾಗ್ ಹೊಡೆಯುತ್ತಾರೆ ಮತ್ತು ನಾವು ಅವರನ್ನು ಗಂಭೀರವಾಗಿ ಪರಿಗಣಿಸಬಾರದು. ಜನರು ಸಹ ಅವರನ್ನು ಗಂಭೀರವಾಗಿ ಪರಿಗಣಿಸಬಾರದು" ಎಂದು ಸಚಿವರು ಹೇಳಿದರು.

ಹಿಮಾಚಲದ ಜನರು ಬುದ್ಧಿವಂತರು, ವಿದ್ಯಾವಂತರು ಮತ್ತು ರಾಜಕೀಯವಾಗಿ ಜಾಗೃತರು. ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಪರೇಷನ್ ಲೋಟಸ್ ಮೂಲಕ ಪ್ರಯತ್ನ ಮಾಡಿತು ಎಂದು ಜನರಿಗೆ ತಿಳಿದಿದೆ. ಆದರೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಅದನ್ನು ವಿಫಲಗೊಳಿಸಿದರು ಎಂದರು.

ಕಂಗನಾ ಇತ್ತೀಚೆಗೆ ತಮ್ಮ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ "ವಿದ್ಯುತ್ ಬಿಲ್‌ ಹೆಚ್ಚಳದ" ಕುರಿತು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

SCROLL FOR NEXT