ಡೇವಿಡ್ ಹೆಡ್ಲಿ  
ದೇಶ

ಭಾರತ ವೀಸಾ ಪಡೆಯಲು ಡೇವಿಡ್ ಹೆಡ್ಲಿಗೆ ಸಹಾಯ ಮಾಡಿದ್ದ ತಹವ್ವೂರ್ ರಾಣಾ!

ರಾಣಾ 1990 ರ ದಶಕದ ಉತ್ತರಾರ್ಧದಲ್ಲಿ ಕೆನಡಾಕ್ಕೆ ವಲಸೆ ಹೋಗುವ ಮೊದಲು ಪಾಕಿಸ್ತಾನ ಸೇನಾ ವೈದ್ಯಕೀಯ ದಳದಲ್ಲಿ ಸೇವೆ ಸಲ್ಲಿಸಿದ್ದನು. ವಲಸೆ ಸಲಹಾ ಸಂಸ್ಥೆಯನ್ನು ಪ್ರಾರಂಭಿಸಿದ್ದನು.

ಮುಂಬೈ: 26/11ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಆರೋಪಿ, ಎನ್ಐಎ ಕಸ್ಟಡಿಯಲ್ಲಿರುವ ತಹವ್ವೂರ್ ಹುಸೇನ್ ರಾಣಾ, ಸಹ-ಸಂಚುಕೋರ ಡೇವಿಡ್ ಕೋಲ್ಮನ್ ಹೆಡ್ಲಿಗೆ ಭಾರತೀಯ ವೀಸಾ ಪಡೆಯಲು ಸಹಾಯ ಮಾಡಿದ್ದ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿನ್ನೆ ಗುರುವಾರ ಸಂಜೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ರಾಣಾನನ್ನು ಔಪಚಾರಿಕವಾಗಿ ಬಂಧಿಸಿ ಎನ್ ಐಎ ಕಸ್ಡಡಿಗೊಪ್ಪಿಸಿದೆ. ಆತನನ್ನು ಅಮೆರಿಕದಿಂದ ಯಶಸ್ವಿಯಾಗಿ ಹಸ್ತಾಂತರಿಸಿದ ನಂತರ ಭಾರತಕ್ಕೆ ಕರೆತರಲಾಯಿತು. ದೆಹಲಿಯ ವಿಶೇಷ ನ್ಯಾಯಾಲಯವು 18 ದಿನಗಳ ಕಾಲ ಸಂಸ್ಥೆಯ ಕಸ್ಟಡಿಯಲ್ಲಿ ಇರಿಸಿದೆ.

ರಾಣಾ 1990 ರ ದಶಕದ ಉತ್ತರಾರ್ಧದಲ್ಲಿ ಕೆನಡಾಕ್ಕೆ ವಲಸೆ ಹೋಗುವ ಮೊದಲು ಪಾಕಿಸ್ತಾನ ಸೇನಾ ವೈದ್ಯಕೀಯ ದಳದಲ್ಲಿ ಸೇವೆ ಸಲ್ಲಿಸಿದ್ದನು. ವಲಸೆ ಸಲಹಾ ಸಂಸ್ಥೆಯನ್ನು ಪ್ರಾರಂಭಿಸಿದ್ದನು. ನಂತರ ಅಮೆರಿಕಕ್ಕೆ ತೆರಳಿ ಚಿಕಾಗೋದಲ್ಲಿ ಕಚೇರಿಯನ್ನು ಸ್ಥಾಪಿಸಿದನು.

ನವೆಂಬರ್ 2008 ರ ದಾಳಿಯ ಮೊದಲು ಮುಂಬೈನಲ್ಲಿ ವಿಚಕ್ಷಣ ಕಾರ್ಯಾಚರಣೆಯನ್ನು ನಡೆಸಲು ರಾಣಾ ತನ್ನ ಸಂಸ್ಥೆಯ ಮೂಲಕ ಹೆಡ್ಲಿಗೆ ರಕ್ಷಣೆ ನೀಡಿ ಹತ್ತು ವರ್ಷಗಳ ವೀಸಾ ವಿಸ್ತರಣೆಯನ್ನು ಪಡೆಯಲು ಸಹಾಯ ಮಾಡಿದ್ದನು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿದ್ದಾಗ ಹೆಡ್ಲಿ ವಲಸೆ ವ್ಯವಹಾರವನ್ನು ನಡೆಸುವುದರಲ್ಲಿ ಮುಂಚೂಣಿಯಲ್ಲಿದ್ದ ಮತ್ತು ರಾಣಾ ಜೊತೆ ನಿಯಮಿತವಾಗಿ ಸಂಪರ್ಕದಲ್ಲಿದ್ದ. ಈ ಅವಧಿಯಲ್ಲಿ ಇಬ್ಬರ ನಡುವೆ 230 ಕ್ಕೂ ಹೆಚ್ಚು ಫೋನ್ ಕರೆಗಳು ನಡೆದಿವೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಎನ್‌ಐಎ ಚಾರ್ಜ್‌ಶೀಟ್‌ನ ಪ್ರಕಾರ, ಈ ಅವಧಿಯಲ್ಲಿ ದಾಳಿಯ ಮತ್ತೊಬ್ಬ ಸಹ-ಸಂಚುಕೋರ 'ಮೇಜರ್ ಇಕ್ಬಾಲ್' ಜೊತೆಯೂ ರಾಣಾ ಸಂಪರ್ಕದಲ್ಲಿದ್ದ. ಭಯೋತ್ಪಾದನಾ ದಾಳಿಗೆ ಕೆಲವು ದಿನಗಳ ಮೊದಲು, ನವೆಂಬರ್ 2008 ರಲ್ಲಿ ರಾಣಾ ಭಾರತಕ್ಕೆ ಭೇಟಿ ನೀಡಿದ್ದನು.

ರಾಣಾ ವಿರುದ್ಧ ಮುಂಬೈ ಪೊಲೀಸರು 2023ರಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನ ಪ್ರಕಾರ, 26/11 ದಾಳಿಗೆ ಮುನ್ನ ಪೊವೈನಲ್ಲಿರುವ ಹೋಟೆಲ್‌ನಲ್ಲಿ ವಾಸಿಸುತ್ತಿದ್ದನು. ಪ್ರಕರಣದಲ್ಲಿ ಸಾಕ್ಷಿಯಾಗಿ ಪಟ್ಟಿ ಮಾಡಲಾದ ವ್ಯಕ್ತಿಯೊಂದಿಗೆ ದಕ್ಷಿಣ ಮುಂಬೈನ ಜನದಟ್ಟಣೆಯ ಸ್ಥಳಗಳ ಬಗ್ಗೆ ಚರ್ಚೆ ನಡೆಸಿದ್ದನು. ತರುವಾಯ, 166 ಜೀವಗಳನ್ನು ಬಲಿ ಪಡೆದ ಮಾರಕ ದಾಳಿಯ ಸಮಯದಲ್ಲಿ ಈ ಸ್ಥಳಗಳಲ್ಲಿ ಕೆಲವನ್ನು ಪಾಕಿಸ್ತಾನಿ ಭಯೋತ್ಪಾದಕರು ಗುರಿಯಾಗಿಸಿಕೊಂಡರು.

ಭಯೋತ್ಪಾದಕರು ಮುಂಬೈನ ತಾಜ್ ಮಹಲ್ ಮತ್ತು ಒಬೆರಾಯ್ ಹೋಟೆಲ್‌ಗಳು, ಲಿಯೋಪೋಲ್ಡ್ ಕೆಫೆ, ಚಾಬಾದ್ ಹೌಸ್ ಮತ್ತು ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ ಸೇರಿದಂತೆ ಹಲವು ಪ್ರಸಿದ್ಧ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT