ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಕಿಶ್ತ್ವಾರ್‌ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ; ಉಧಂಪುರದಲ್ಲಿ ಮುಂದುವರೆದ ಶೋಧ

ಉಧಂಪುರ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಪತ್ತೆಹಚ್ಚಲು ಪ್ರತ್ಯೇಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ ಉಧಂಪುರ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಪತ್ತೆಹಚ್ಚಲು ಪ್ರತ್ಯೇಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಪ್ರದೇಶದ ಗುಡ್ಡಗಾಡು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಉಗ್ರರು ಅಡಗಿರುವ ಶಂಕೆಯ ಮೇರೆಗೆ ತೀವ್ರ ನಿಗಾ ಇಡಲು ಭದ್ರತಾ ಪಡೆಗಳು, ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶಕ್ಕೆ ಕಣ್ಗಾವಲು ವ್ಯಾಪ್ತಿಯನ್ನು ವಿಸ್ತರಿಸಿವೆ.

ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಪ್ರಾರಂಭಿಸಿದ ಶೋಧ ಮತ್ತು ಹತ್ಯೆ ಕಾರ್ಯಾಚರಣೆ ಸಮಯದಲ್ಲಿ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ, ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದವು. ಪ್ರತಿ ದಾಳಿಯಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಗಿದೆ" ಎಂದು ಸೇನೆ ವೈಟ್ ನೈಟ್ ಕಾರ್ಪ್ಸ್ ಅಥವಾ 16 ಕಾರ್ಪ್ಸ್, X ನಲ್ಲಿ ಪೋಸ್ಟ್‌ ಮಾಡಿದೆ.

"ಪ್ರತಿಕೂಲ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ, ನಮ್ಮ ಧೈರ್ಯಶಾಲಿ ಸೈನಿಕರು ನಿರಂತರವಾಗಿ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ" ಎಂದು ಸೇನೆ ಹೇಳಿದೆ.

ಹತ್ಯೆಗೀಡಾದ ಭಯೋತ್ಪಾದಕ ಪಾಕಿಸ್ತಾನದ ಸೈಫುಲ್ಲಾ ಮಾಡ್ಯೂಲ್‌ನ ಭಾಗವಾಗಿದ್ದನೆಂದು ವರದಿಯಾಗಿದೆ. ಆದರೆ ಇದನ್ನು ಅಧಿಕೃತವಾಗಿ ಸೇನೆ ಖಚಿತಪಡಿಸಿಲ್ಲ.

ಬುಧವಾರ ಚತ್ರುವಿನ ನೈದ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಸಣ್ಣ ಗುಂಡಿನ ಚಕಮಕಿ ನಡೆದಿದ್ದು, ಇದರ ಪರಿಣಾಮವಾಗಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

ಮೋದಿ ನಿಜವಾದ ಮುತ್ಸದ್ದಿ: ದೂರದೃಷ್ಟಿ ಹೊಂದಿರುವ ಅದ್ಭುತ ನಾಯಕ; ನಟ ಮೋಹನ್‌ ಲಾಲ್ ಶ್ಲಾಘನೆ

SCROLL FOR NEXT