ಸಂಗ್ರಹ ಚಿತ್ರ 
ದೇಶ

ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟಣೆ: 350ಕ್ಕೂ ಹೆಚ್ಚು ವಿಮಾನಗಳು ವಿಳಂಬ

ಕೆಟ್ಟ ಹವಾಮಾನ ಮತ್ತು ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ.

ನವದೆಹಲಿ: ಕೆಟ್ಟ ಹವಾಮಾನ ಮತ್ತು ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ಶುಕ್ರವಾರದಂದು ಧೂಳಿನ ಬಿರುಗಾಳಿಯಿಂದಾಗಿ, ಅನೇಕ ವಿಮಾನಗಳನ್ನು ರದ್ದುಗೊಳಿಸಲಾಗಿದ್ದು ಅವುಗಳ ಮಾರ್ಗಗಳನ್ನು ಬದಲಾಯಿಸಲಾಯಿತು. ಇದರ ಪರಿಣಾಮ ಶನಿವಾರದವರೆಗೂ ಮುಂದುವರೆಯಿತು. ಇದರಿಂದಾಗಿ ಪ್ರಯಾಣಿಕರು ತೀವ್ರ ತೊಂದರೆಯನ್ನು ಎದುರಿಸಬೇಕಾಯಿತು.

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಿಮಾನ ಕಾರ್ಯಾಚರಣೆಗಳು ಸಹಜ ಸ್ಥಿತಿಗೆ ಮರಳುತ್ತಿವೆ ಎಂದು ತಿಳಿಸಿದೆ. ಶುಕ್ರವಾರ ರಾತ್ರಿ ಹವಾಮಾನ ವೈಪರೀತ್ಯದಿಂದಾಗಿ ಕೆಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಪ್ರಯಾಣಿಕರಿಗೆ ಅನುಕೂಲವನ್ನು ಒದಗಿಸಲು ವಿಮಾನ ನಿಲ್ದಾಣ ಆಡಳಿತವು ಎಲ್ಲಾ ಸಂಬಂಧಿತ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಫ್ಲೈಟ್ ಟ್ರ್ಯಾಕಿಂಗ್ ಪೋರ್ಟಲ್ Flightradar24 ಪ್ರಕಾರ, ಸರಾಸರಿ 40 ನಿಮಿಷಗಳಿಗಿಂತ ಹೆಚ್ಚು ವಿಳಂಬವಾಗಿದೆ. ದೆಹಲಿಯಲ್ಲಿ ಭಾರೀ ವಾಯು ಸಂಚಾರ ಒತ್ತಡದಿಂದಾಗಿ, ವಿಮಾನಗಳ ನಿರ್ಗಮನ ಮತ್ತು ಆಗಮನಕ್ಕೆ ಅನುಮತಿ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಇದು ತನ್ನ ಸಂಪೂರ್ಣ ಜಾಲದ ಮೇಲೆ ಪರಿಣಾಮ ಬೀರಿದೆ ಎಂದು ಇಂಡಿಗೋ ತಿಳಿಸಿದೆ. ಪ್ರಸ್ತುತ, ವಿಮಾನ ನಿಲ್ದಾಣದಲ್ಲಿ ಕೇವಲ ಮೂರು ರನ್‌ವೇಗಳು ಕಾರ್ಯನಿರ್ವಹಿಸುತ್ತಿವೆ. ಏಕೆಂದರೆ ಒಂದು ರನ್‌ವೇ ನಿರ್ವಹಣೆಗಾಗಿ ಮುಚ್ಚಲಾಗಿದೆ. ವಿಳಂಬವಾದ ವಿಮಾನಗಳಿಗಾಗಿ ಕಾಯುತ್ತಿರುವ ಜನಸಂದಣಿ ಮತ್ತು ಅವ್ಯವಸ್ಥೆಯ ವೀಡಿಯೊಗಳನ್ನು ಅನೇಕ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

CISF ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದು ಪ್ರಯಾಣಿಕರ ದೂರುಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. ಧೂಳಿನ ಬಿರುಗಾಳಿಯಿಂದಾಗಿ ಹಲವಾರು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಿಂದಾಗಿ ಟರ್ಮಿನಲ್‌ನಲ್ಲಿ ಪ್ರಯಾಣಿಕರ ನೂಕು ನುಗ್ಗಲು ಉಂಟಾಯಿತು. ಹವಾಮಾನ ವೈಪರೀತ್ಯದಿಂದಾಗಿ 22 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಐದು ವಿಮಾನಗಳ ಹಾರಾಟ ರದ್ದಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ವಿಮಾನ ನಿಲ್ದಾಣದ ಆಡಳಿತ ವ್ಯವಸ್ಥೆಗಳ ಬಗ್ಗೆ ಪ್ರಯಾಣಿಕರು ತೀವ್ರವಾಗಿ ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT