ಬಾಬಾ ರಾಮ್ ದೇವ್ (ಸಾಂದರ್ಭಿಕ ಚಿತ್ರ) 
ದೇಶ

ಟಾಯ್ಲೆಟ್ ಕ್ಲೀನರ್'ನಂತಿರುವ ಸಾಫ್ಟ್ ಡ್ರಿಂಕ್ ಹಣ ಮಸೀದಿ-ಮದರಸಾಗೆ ಹೋಗುತ್ತದೆ: ಬಾಬಾ ರಾಮ್ ದೇವ್ 'ಶರಬತ್ ಜಿಹಾದ್' ಹೇಳಿಕೆ ವೈರಲ್!

ಪತಂಜಲಿ ಶರಬತ್ ಪ್ರಚಾರ ಮಾಡುವ ವಿಡಿಯೋವೊಂದರಲ್ಲಿ ರಾಮ್ ಅವರು "ಶರ್ಬತ್ ಜಿಹಾದ್" ಎಂಬ ಪದವನ್ನು ಬಳಸಿದ್ದು, ಈ ವಿಡಿಯೋವನ್ನು ಪತಾಂಜಲಿ ಪ್ರಾಡಕ್ಟ್ಸ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ನವದೆಹಲಿ: ಟಾಯ್ಲೆಟ್ ಕ್ಲೀನರ್'ನಂತಿರುವ ಸಾಫ್ಟ್ ಡ್ರಿಂಕ್ ಹಣ ಮಸೀದಿ-ಮದರಸಾಗೆ ಹೋಗುತ್ತದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಹೇಳಿದ್ದು, ಈ ಹೇಳಿಕೆ ಭಾರೀ ವೈರಲ್ ಆಗುತ್ತಿದೆ.

ಪತಂಜಲಿ ಶರಬತ್ ಪ್ರಚಾರ ಮಾಡುವ ವಿಡಿಯೋವೊಂದರಲ್ಲಿ ರಾಮ್ ಅವರು "ಶರ್ಬತ್ ಜಿಹಾದ್" ಎಂಬ ಪದವನ್ನು ಬಳಸಿದ್ದು, ಈ ವಿಡಿಯೋವನ್ನು ಪತಾಂಜಲಿ ಪ್ರಾಡಕ್ಟ್ಸ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿ ರಾಮದೇವ್ ಅವರು ತಮ್ಮ ಪತಂಜಲಿ ಗುಲಾಬಿ ಶರಬತ್'ನ್ನು ಪ್ರಚಾರ ಮಾಡುವ ವೇಳೆ, ಇತರ ಶರಬತ್ ಮಾರಾಟ ಕಂಪನಿಗಳು ತಮ್ಮ ಆದಾಯವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿವೆ ಎಂದು ಹೇಳಿರುವುದು ಕಂಡು ಬಂದಿದೆ.

ಬೇಸಿಗೆಯ ಬೇಗೆ ತಣಿಸಲು ಜನರು ಸಾಫ್ಟ್ ಡ್ರಿಂಕ್ ಗಳನ್ನು ಸೇವನೆ ಮಾಡುತ್ತಾರೆ. ಆದರೆ, ಈ ಸಾಫ್ಟ್ ಡ್ರಿಂಕ್ ಗಳಲ್ಲಿರುವುದು ಟಾಯ್ಲೆಟ್ ಕ್ಲೀನರ್. ಇದೊಂದು ರೀತಿಯಲ್ಲಿ ವಿಷವಿದ್ದಂತೆ. ಒಂದು ಶರಬತ್ ಕಂಪನಿಯಂತೂ ಇದನ್ನು ಮಾರಿ ಬಂದ ಹಣದಲ್ಲಿ ಮದರಸಾ, ಮಸೀದಿ ನಿರ್ಮಾಣ ಮಾಡುತ್ತಿದೆ. ಶರಬತ್ ಮಾರಾಟ ಕಂಪನಿಯು ಧರ್ಮದ ಹೆಸರಿನಲ್ಲಿ ಹಣವನ್ನು ಬಳಸುತ್ತಿದೆ. ಅದು ಅವರ ಧರ್ಮವಾಗಿರಬಹುದು. ಆದರೆ, ಜನರು ಯಾವ ಶರಬತ್ ಕುಡಿಯುತ್ತಾರೆ ಅದರ ಲಾಭ ಯಾರಿಗೆ ಹೋಗುತ್ತದೆ ಎಂಬುದನ್ನು ತಿಳಿಯಬೇಕು. ಇದೂ ಲವ್ ಜಿಹಾದ್, ವೋಟ್ ಜಿಹಾದ್ ಇದ್ದಂತೆ. ಈಗ ಶರಬತ್ ಜಿಹಾದ್ ಶುರುವಾಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗುತ್ತಿವೆ

ಟಾಯ್ಲೆಟ್ ಕ್ಲೀನರ್‌ಗಳಂತಿರುವ ತಂಪು ಪಾನೀಯಗಳಿಂದ ವಿಷದ ದಾಳಿ ನಡೆಯುತ್ತಿದೆ. ಶರಬತ್ ಮಾರಾಟ ಮಾಡುವ ಕಂಪನಿಯು ತನ್ನ ಗಳಿಕೆಯನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ. ಆದರೆ ಪತಾಂಜಲಿ ಶರಬತ್ ಗಳಿಂದ ದೊರಕುವ ಲಾಭ ಗುರುಕುಲಗಳು, ಪತಾಂಜಲಿ ವಿಶ್ವವಿದ್ಯಾಲಯ ಮತ್ತು ಭಾರತೀಯ ಶಿಕ್ಷಣ ಸಂಸ್ಥೆಗಳಿಗೆ ಬೆಂಬಲವಾಗುತ್ತದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT