ಕನ್ಹಯ್ಯಾ ಕುಮಾರ್ 
ದೇಶ

ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, RSS ನಿಂದನೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ಪೊಲೀಸರಿಗೆ BJP ದೂರು

ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ.

ಪಾಟ್ನಾ: ಇತ್ತೀಚಿಗೆ ಟಿವಿ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ವಿರುದ್ಧ ಬಿಜೆಪಿ ಶನಿವಾರ ಪಾಟ್ನಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ. ಹೇಳಿಕೆಗಳ ಕುರಿತು ಕನ್ಹಯ್ಯಾ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಇಕ್ಬಾಲ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 11 ರಂದು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ 'ತುಕ್ಡೆ ತುಕ್ಡೆ ಗ್ಯಾಂಗ್'ನ ಭಾಗವಾಗಿರುವ ಕನ್ಹಯ್ಯಾ ಕುಮಾರ್, ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮತ್ತು ಅದರ ಸಿದ್ಧಾಂತಗಳ ವಿರುದ್ಧ ನಿಂದನೀಯ ಭಾಷೆಯನ್ನು ಬಳಸಿದ್ದಾರೆ.

ಸಂದರ್ಶನದಲ್ಲಿ ಅವರು ಬಳಸಿರುವ ಭಾಷೆ ಅತ್ಯಂತ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲ ಎಂದು ಇಕ್ಬಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ಹಯ್ಯಾ ಕುಮಾರ್ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT