ಯೋಗಿ ಆದಿತ್ಯನಾಥ TNIE
ದೇಶ

ಬಂಗಾಳದಲ್ಲಿ ವಕ್ಫ್ ಹೆಸರಲ್ಲಿ ಹಿಂಸಾಚಾರ; ಹಿಂದೂಗಳನ್ನು ಮನೆಗಳಿಂದ ಹೊರಗೆಳೆದು ಹತ್ಯೆ: ಸಿಎಂ ಯೋಗಿ ಆಕ್ರೋಶ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಅವರನ್ನು ಅವರ ಮನೆಗಳಿಂದ ಹೊರಗೆಳೆದು ಕೊಲೆ ಮಾಡಲಾಗಿದೆ. ಇವರೆಲ್ಲಾ ಯಾರು?

ಲಖನೌ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ವಿಷಯದಲ್ಲಿ ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂದು ಸಿಎಂ ಯೋಗಿ ಆರೋಪಿಸಿದರು. ವಕ್ಫ್ ಕಾನೂನಿನ ಹೆಸರಿನಲ್ಲಿ ಹಿಂಸಾಚಾರವನ್ನು ಪ್ರಚೋದಿಸಲಾಗುತ್ತಿದ್ದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಹಿಂಸಾಚಾರದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

ಲಖನೌದಲ್ಲಿ ನಡೆದ ಡಾ. ಭೀಮರಾವ್ ಅಂಬೇಡ್ಕರ್ ಸಮ್ಮಾನ್ ಸಮರೋಹ್ ಅನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ದಲಿತರ ಗುಡಿಸಲುಗಳು ಮತ್ತು ಭೂಮಿಯನ್ನು ಆಕ್ರಮಿಸಿಕೊಂಡಿರುವ ಕೆಲವು ಜನರು ಈ ಪಕ್ಷಗಳೊಂದಿಗೆ ಸಂಬಂಧ ಹೊಂದಿದ್ದಾರೆಂದು ನೀವು ನೋಡಿರಬೇಕು. ವಕ್ಫ್ ಹೆಸರಿನಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವ ಅದೇ ರಾಜ್ಯ ಇದು (ಪಶ್ಚಿಮ ಬಂಗಾಳ) ಎಂದು ತಿಳಿದು ನಮಗೆ ಆಶ್ಚರ್ಯವಾಗಿದೆ. ಅವರ ಬಳಿ ಯಾವುದೇ ದಾಖಲೆಗಳು ಅಥವಾ ಕಂದಾಯ ದಾಖಲೆಗಳಿಲ್ಲ. ಈಗ ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿ ಅದರ ಮೇಲೆ ಕ್ರಮ ಕೈಗೊಳ್ಳುತ್ತಿರುವಾಗ, ಅದರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸಲಾಗುತ್ತಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಅವರನ್ನು ಅವರ ಮನೆಗಳಿಂದ ಹೊರಗೆಳೆದು ಕೊಲೆ ಮಾಡಲಾಗಿದೆ. ಇವರೆಲ್ಲಾ ಯಾರು? ಈ ಭೂಮಿಯಿಂದ ಹೆಚ್ಚಿನ ಲಾಭ ಪಡೆಯಲಿರುವವರು ಇದೇ ದಲಿತರು, ವಂಚಿತರು ಮತ್ತು ಬಡ ಹಿಂದೂಗಳು. ದಲಿತರು, ವಂಚಿತರು ಮತ್ತು ಬಡವರು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುತ್ತಾರೆ ಎಂಬ ಭಯ ಅವರಲ್ಲಿದೆ. ಆಗಾದರೆ ಮತಬ್ಯಾಂಕ್ ಕೊನೆಗೊಳ್ಳುತ್ತದೆ. ದಾರಿತಪ್ಪಿಸುವ ರಾಜಕೀಯಕ್ಕೆ ಕೊನೆ ಇಲ್ಲ. ಅದಕ್ಕಾಗಿಯೇ ಅವರು ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮೂರು ವರ್ಷಗಳ ಹಿಂದೆ, ರಾಜ್ಯಸಭಾ ಸಂಸದ ಮತ್ತು ಉತ್ತರ ಪ್ರದೇಶದ ಮಾಜಿ ಡಿಜಿಪಿ ಬ್ರಿಜ್‌ಲಾಲ್ ಒಂದು ಪುಸ್ತಕ ಬರೆದಿದ್ದರು. ಆ ಪುಸ್ತಕವು ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಮತ್ತು ಸ್ವಾತಂತ್ರ್ಯದ ಕಾಲದ ಇಬ್ಬರು ಮಹಾನ್ ದಲಿತ ಯೋಧರ ತುಲನಾತ್ಮಕ ಅಧ್ಯಯನವನ್ನು ಆಧರಿಸಿದೆ. ಒಂದು ಕಡೆ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಇದ್ದರು. ಅವರು ತಮ್ಮ ಆರಂಭ ಮತ್ತು ಅಂತ್ಯವು ಭಾರತೀಯರಾಗಿರುವುದಾಗಿ ಹೇಳಿದ್ದರು. ಇನ್ನೊಂದು ಕಡೆ ಪಾಕಿಸ್ತಾನವನ್ನು ಬೆಂಬಲಿಸಿದ್ದ ಯೋಗೇಂದ್ರ ನಾಥ್ ಮಂಡಲ್ ಇದ್ದರು. ಆದರೆ ಅವರು ಅಲ್ಲಿ ಒಂದು ವರ್ಷವೂ ವಾಸಿಸಲು ಸಾಧ್ಯವಾಗಲಿಲ್ಲ. ಯೋಗೇಂದ್ರ ನಾಥ್ ಮಂಡಲ್ ಅವರ ಕೃತ್ಯಗಳಿಗೆ ಬಾಂಗ್ಲಾದೇಶಿ ಹಿಂದೂಗಳು ಇನ್ನೂ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ವಾಸಿಸುವ ಎಲ್ಲಾ ಚಿತ್ರಹಿಂಸೆಗೊಳಗಾದ ಮತ್ತು ತುಳಿತಕ್ಕೊಳಗಾದ ಹಿಂದೂಗಳು ದಲಿತರು. ಕಾಂಗ್ರೆಸ್, ಎಸ್‌ಪಿ ಮತ್ತು ಮಮತಾ ಬ್ಯಾನರ್ಜಿ ಅವರ ಪಕ್ಷದಿಂದ ಯಾವುದೇ ರಾಜಕೀಯ ಪಕ್ಷವು ತಮ್ಮ (ಬಾಂಗ್ಲಾದೇಶಿ ಹಿಂದೂಗಳು) ಪರವಾಗಿ ಧ್ವನಿ ಎತ್ತಲಿಲ್ಲ. ಬಿಜೆಪಿ ಮಾತ್ರ ಅವರ ಪರವಾಗಿ ಧ್ವನಿ ಎತ್ತಿತು. ನಾವು ಪ್ರತಿಯೊಬ್ಬ ಹಿಂದೂವನ್ನು ರಕ್ಷಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT