ಮಲ್ಲಿಕಾರ್ಜುನ ಖರ್ಗೆ 
ದೇಶ

ಬಿಜೆಪಿ-ಆರ್‌ಎಸ್‌ಎಸ್ ಅಂಬೇಡ್ಕರ್ ಶತ್ರುಗಳು; ಮೋದಿ ಸರ್ಕಾರದಿಂದ ಕೇವಲ ಲಿಪ್ ಸರ್ವಿಸ್: ಖರ್ಗೆ

1952 ರ ಚುನಾವಣೆಯಲ್ಲಿ ಎಸ್.ಎ. ಡಾಂಗೆ ಮತ್ತು ವಿ.ಡಿ. ಸಾವರ್ಕರ್, ಸಂವಿಧಾನ ಶಿಲ್ಪಿಯ ಸೋಲಿಗೆ ಕಾರಣ ಎಂದು ಅಂಬೇಡ್ಕರ್ ಬರೆದ ಪತ್ರವನ್ನು ಉಲ್ಲೇಖಿಸಿ ಖರ್ಗೆ ತಿರುಗೇಟು ನೀಡಿದರು.

ನವದೆಹಲಿ: ಮೋದಿ ಸರ್ಕಾರವು ಬಿ.ಆರ್. ಅಂಬೇಡ್ಕರ್ ಅವರ ಪರಂಪರೆಗೆ ಕೇವಲ "ಲಿಪ್ ಸರ್ವಿಸ್" ನೀಡುತ್ತಿದೆ. ಆದರೆ ಅವರ ಆಶಯಗಳನ್ನು ಈಡೇರಿಸಲು ಏನನ್ನೂ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನ ಶಿಲ್ಪಿಯ "ಶತ್ರುಗಳು" ಎಂದು ಹೇಳಿದರು.

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ನಡೆಸಿಕೊಂಡ ರೀತಿಯನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, 1952 ರ ಚುನಾವಣೆಯಲ್ಲಿ ಎಸ್.ಎ. ಡಾಂಗೆ ಮತ್ತು ವಿ.ಡಿ. ಸಾವರ್ಕರ್, ಸಂವಿಧಾನ ಶಿಲ್ಪಿಯ ಸೋಲಿಗೆ ಕಾರಣ ಎಂದು ಅಂಬೇಡ್ಕರ್ ಬರೆದ ಪತ್ರವನ್ನು ಉಲ್ಲೇಖಿಸಿ ತಿರುಗೇಟು ನೀಡಿದರು.

ಅಂಬೇಡ್ಕರ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ರಾಷ್ಟ್ರವ್ಯಾಪಿ ಜಾತಿ ಜನಗಣತಿಯ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಸಂವಿಧಾನವು ನಾಗರಿಕರಿಗೆ ಅಂಬೇಡ್ಕರ್ ನೀಡಿದ ಉಡುಗೊರೆಯಾಗಿದೆ. ಏಕೆಂದರೆ ಅದು ಅವರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ಹಕ್ಕನ್ನು ನೀಡುತ್ತದೆ ಎಂದು ಅವರು ಹೇಳಿದರು.

"ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಕಾಂಗ್ರೆಸ್‌ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಷ್ಟ್ರವ್ಯಾಪಿ ಜಾತಿ ಜನಗಣತಿ ಅಗತ್ಯವನ್ನು ಪ್ರತಿಪಾದಿಸಿದ ಖರ್ಗೆ, "ಕೇಂದ್ರ ಸರ್ಕಾರ 2011 ರ ಜನಗಣತಿಯ ಆಧಾರದ ಮೇಲೆ ನೀತಿಗಳನ್ನು ರೂಪಿಸುತ್ತಿದೆ ಮತ್ತು 2021 ರ ಜನಗಣತಿಯ ಬಗ್ಗೆ ಏನೂ ಮಾಹಿತಿ ಇಲ್ಲ. ಜನಗಣತಿಯ ಆಧಾರದ ಮೇಲೆ ನೀತಿಗಳನ್ನು ರೂಪಿಸಲಾಗುತ್ತದೆ. ಸಾಮಾನ್ಯ ಜನಗಣತಿಯ ಜೊತೆಗೆ, ಯಾವ ವಿಭಾಗವು ಎಷ್ಟು ಪ್ರಗತಿ ಸಾಧಿಸಿದೆ ಎಂದು ತಿಳಿಯಲು ಜಾತಿ ಜನಗಣತಿಯನ್ನು ಸಹ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ" ಎಂದು ಅವರು ಹೇಳಿದರು.

ಜನವರಿ 20, 2006 ರಂದು ಕಾಂಗ್ರೆಸ್ ಪರಿಚಯಿಸಿದ ಆರ್ಟಿಕಲ್ 15(5) ಅಡಿಯಲ್ಲಿ ನೀಡಲಾದ ಮೂಲಭೂತ ಖಾತರಿಯಾದ ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ತಕ್ಷಣ ಮೀಸಲಾತಿ ಜಾರಿಗೆ ತರಬೇಕು ಎಂದು ಅವರು ಹೇಳಿದರು.

ಇನ್ನು ಮೀಸಲಾತಿ ಮೇಲಿನ ಶೇಕಡಾ 50 ರಷ್ಟು ಮಿತಿಯನ್ನು ತೆಗೆದುಹಾಕುವ ಅಗತ್ಯವನ್ನು ಖರ್ಗೆ ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT