ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಅನ್ನಾ ಲೆಜ್ನೆವಾ 
ದೇಶ

ಅಗ್ನಿ ಅವಘಡದಿಂದ ಮಗ ಪಾರು: ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ 8 ವರ್ಷದ ಪುತ್ರ ಮಾರ್ಕ್ ಶಂಕರ್ ಏಪ್ರಿಲ್ 8ರಂದು ಸಿಂಗಾಪುರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ.

ತಿರುಪತಿ: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಟಾಲಿವುಡ್ ನಟ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ 8 ವರ್ಷದ ಪುತ್ರ ಮಾರ್ಕ್ ಶಂಕರ್ ಏಪ್ರಿಲ್ 8ರಂದು ಸಿಂಗಾಪುರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ.

ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಸಿಂಗಾಪುರಕ್ಕೆ ಹೋಗಿದ್ದ ಪವನ್, ಇದೀಗ ಪತ್ನಿ ಅನ್ನಾ ಲೆಜ್ನೆವಾ ಮತ್ತು ಮಕ್ಕಳನ್ನು ಅಲ್ಲಿಂದ ಸುರಕ್ಷಿತವಾಗಿ ಹೈದರಾಬಾದ್‌ಗೆ ವಾಪಸ್ ಕರೆತಂದಿದ್ದಾರೆ. ಪತಿ ಜೊತೆ ಹೈದರಾಬಾದ್‌ಗೆ ಬರುತ್ತಿದ್ದಂತೆಯೇ, ಸಂಜೆಯೇ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗಿ ಮುಡಿ ಕೊಟ್ಟಿದ್ದಾರೆ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ. ಪವನ್ ಕಲ್ಯಾಣ್ ತಮ್ಮ ಕೆಲಸದಲ್ಲಿ ಬ್ಯುಸಿ ಇರುವುದರಿಂದ ಅನ್ನಾ ಒಬ್ಬರೇ ತಿರುಪತಿಗೆ ಆಗಮಿಸಿ, ಮುಡಿ ಸಮರ್ಪಿಸಿದ್ದಾರೆ.

ಹೈದರಾಬಾದ್‌ಗೆ ಮಗ ಮಾರ್ಕ್ ಶಂಕರ್‌ನೊಂದಿಗೆ ವಾಪಸಾದ ನಟ ಪವನ್ ಕಲ್ಯಾಣ್, ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. "ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ಕುಟುಂಬದ ಜೊತೆ ಬೆಂಬಲವಾಗಿ ನಿಂತ ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಧನ್ಯವಾದಗಳು" ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT