ಡಿಜಿಟಲ್ ಅರೆಸ್ಟ್ (ಸಾಂಕೇತಿಕ ಚಿತ್ರ)  online desk
ದೇಶ

ಡಿಜಿಟಲ್ ಅರೆಸ್ಟ್ ಪ್ರಕರಣ: 12 ಕಡೆ ಸಿಬಿಐ ದಾಳಿ, ನಾಲ್ವರು ಸೈಬರ್ ಕಿಂಗ್‌ಪಿನ್‌ಗಳ ಬಂಧನ

ವಿವಿಧ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ, ಹಲವು ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಹಣ ಸುಲಿಗೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಸೈಬರ್ ಅಪರಾಧಿಗಳು ತಾವು ಕಾನೂನು ಜಾರಿ ಅಧಿಕಾರಿಗಳೆಂದು ಹೇಳಿಕೊಂಡು ಕಳೆದ ಮೂರು ತಿಂಗಳಲ್ಲಿ 42 ಬಾರಿ, ಒಟ್ಟು 7.67 ಕೋಟಿ ರೂ. ಸುಲಿಗೆ ಮಾಡಿರುವ ಪ್ರಮುಖ 'ಡಿಜಿಟಲ್ ಅರೆಸ್ಟ್' ಪ್ರಕರಣದಲ್ಲಿ ನಾಲ್ವರು ಕಿಂಗ್‌ಪಿನ್‌ಗಳನ್ನು ಬಂಧಿಸಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಮಂಗಳವಾರ ತಿಳಿಸಿದೆ.

ಮೂಲತಃ ರಾಜಸ್ಥಾನದ ಜುನ್‌ಜುನುವಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ರಾಜಸ್ಥಾನ ಸರ್ಕಾರದ ಕೋರಿಕೆಯ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ವಿವಿಧ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ, ಹಲವು ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಹಣ ಸುಲಿಗೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ನಡೆಸುತ್ತಿರುವ ಆಪರೇಷನ್ ಚಕ್ರ-ವಿ ಕಾರ್ಯಾಚರಣೆಯ ಭಾಗವಾಗಿ ಮುಂಬೈ ಮತ್ತು ಮೊರಾದಾಬಾದ್‌ನಿಂದ ತಲಾ ಇಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್ ಮತ್ತು ಸಂಭಾಲ್, ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ ಮತ್ತು ಪಶ್ಚಿಮ ಬಂಗಾಳದ ಕೃಷ್ಣನಗರ ಸೇರಿದಂತೆ ದೇಶಾದ್ಯಂತ 12 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿ, ಫಾಲೋ-ಅಪ್ ಶೋಧ ಕಾರ್ಯಾಚರಣೆ ನಡೆಸಿತು.

ಸಿಬಿಐ ಅಧಿಕಾರಿಗಳು ವ್ಯಾಪಕವಾಗಿ ದತ್ತಾಂಶ ವಿಶ್ಲೇಷಣೆ ಮತ್ತು ಪ್ರೊಫೈಲಿಂಗ್ ಒಳಗೊಂಡ ಆಳವಾದ ತನಿಖೆ ನಡೆಸಿದರು. ಅಪರಾಧಿಗಳನ್ನು ಗುರುತಿಸಲು ಸುಧಾರಿತ ತನಿಖಾ ತಂತ್ರಗಳನ್ನು ಬಳಸಲಾಯಿತು" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ತನಿಖೆಯ ಸಮಯದಲ್ಲಿ ದೊರೆತ ಸುಳಿವುಗಳ ಆಧಾರದ ಮೇಲೆ, ಸಿಬಿಐ ಇತ್ತೀಚೆಗೆ ಉತ್ತರ ಪ್ರದೇಶದ ಮೊರಾದಾಬಾದ್ ಮತ್ತು ಸಂಭಾಲ್, ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ ಮತ್ತು ಪಶ್ಚಿಮ ಬಂಗಾಳದ ಕೃಷ್ಣನಗರದ ಹನ್ನೆರಡು ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿತು. ನಂತ ಈ ಹೆಚ್ಚು ಸಂಘಟಿತ ಅಪರಾಧ ಸಿಂಡಿಕೇಟ್‌ನಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು" ಎಂದು ಅವರು ಹೇಳಿದ್ದಾರೆ.

ಶೋಧದ ಸಮಯದಲ್ಲಿ, ಬ್ಯಾಂಕ್ ಖಾತೆ ವಿವರಗಳು, ಡೆಬಿಟ್ ಕಾರ್ಡ್‌ಗಳು, ಚೆಕ್ ಪುಸ್ತಕಗಳು, ಠೇವಣಿ ಸ್ಲಿಪ್‌ಗಳು ಮತ್ತು ಡಿಜಿಟಲ್ ಸಾಧನಗಳು ಸೇರಿದಂತೆ ಗಣನೀಯ ಪುರಾವೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT