ಭಾರತದಲ್ಲಿ ಮಾನ್ಸೂನ್ ಮಳೆ (ಸಾಂದರ್ಭಿಕ ಚಿತ್ರ) 
ದೇಶ

ಈ ಬಾರಿ El Nino ಅಸಂಭವ; ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು Monsoon ಮಳೆ ಸಾಧ್ಯತೆ: IMD

ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ನವದೆಹಲಿ: ಈ ಬಾರಿ ಭಾರತದಲ್ಲಿ ಇಡೀ ಋತುವಿನಲ್ಲಿ ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆ ಇಲ್ಲ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ಈ ಮಾನ್ಸೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

"ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ" ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳು ಈ ಬಾರಿ ಅಭಿವೃದ್ಧಿ ಹೊಂದುವ ಸಾಧ್ಯತೆ ಇಲ್ಲ. ದೇಶದ ಕೆಲವು ಭಾಗಗಳು ಈಗಾಗಲೇ ತೀವ್ರ ಶಾಖವನ್ನು ಎದುರಿಸುತ್ತಿವೆ ಮತ್ತು ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ಉಷ್ಣ ಅಲೆ ದಿನಗಳನ್ನು ನಿರೀಕ್ಷಿಸಲಾಗಿದೆ. ಇದು ವಿದ್ಯುತ್ ಗ್ರಿಡ್‌ಗಳನ್ನು ಒತ್ತಡಕ್ಕೆ ಒಳಪಡಿಸಬಹುದು ಮತ್ತು ನೀರಿನ ಕೊರತೆಗೆ ಕಾರಣವಾಗಬಹುದು ಎಂದು ಅವರು ಹೇಳಿದರು.

ಭಾರತದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದ್ದು, ಇದು ಸುಮಾರು ಶೇ. 42.3 ರಷ್ಟು ಜನಸಂಖ್ಯೆಯ ಜೀವನೋಪಾಯವನ್ನು ಬೆಂಬಲಿಸುತ್ತದೆ ಮತ್ತು ದೇಶದ ಜಿಡಿಪಿಗೆ ಶೇ. 18.2 ರಷ್ಟು ಕೊಡುಗೆ ನೀಡುತ್ತದೆ. ನಿವ್ವಳ ಸಾಗುವಳಿ ಪ್ರದೇಶದ ಶೇ.52ರಷ್ಟು ಭಾಗವು ಪ್ರಾಥಮಿಕ ಮಳೆ ವ್ಯವಸ್ಥೆಯನ್ನು ಅವಲಂಬಿಸಿದೆ.

ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಜೊತೆಗೆ ಕುಡಿಯುವ ನೀರಿಗೆ ನಿರ್ಣಾಯಕವಾಗಿರುವ ಜಲಾಶಯಗಳ ಮರುಪೂರಣಕ್ಕೂ ಇದು ನಿರ್ಣಾಯಕವಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.

ಆದ್ದರಿಂದ, ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆಯು ರಾಷ್ಟ್ರಕ್ಕೆ ದೊಡ್ಡ ಪರಿಹಾರವಾಗಿದೆ. ಸಾಮಾನ್ಯ ಸಂಚಿತ ಮಳೆಯು ದೇಶಾದ್ಯಂತ ಮಳೆಯ ಏಕರೂಪದ ತಾತ್ಕಾಲಿಕ ಮತ್ತು ಪ್ರಾದೇಶಿಕ ವಿತರಣೆಯನ್ನು ಖಾತರಿಪಡಿಸುವುದಿಲ್ಲ, ಹವಾಮಾನ ಬದಲಾವಣೆಯು ಮಳೆ ನೀಡುವ ವ್ಯವಸ್ಥೆಯ ವ್ಯತ್ಯಾಸವನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಹವಾಮಾನ ವಿಜ್ಞಾನಿಗಳು ಹೇಳುವಂತೆ ಮಳೆಗಾಲದ ದಿನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಭಾರೀ ಮಳೆಯ ಘಟನೆಗಳು (ಅಲ್ಪಾವಧಿಯಲ್ಲಿ ಹೆಚ್ಚಿನ ಮಳೆ) ಹೆಚ್ಚುತ್ತಿವೆ, ಇದು ಆಗಾಗ್ಗೆ ಬರ ಮತ್ತು ಪ್ರವಾಹಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT