ತನಿಖೆಗೆ ಹಾಜರಾದ ರಾಬರ್ಟ್ ವಾದ್ರಾ  
ದೇಶ

ಹರಿಯಾಣ ಭೂ ವ್ಯವಹಾರ ಕೇಸು: ED ಮುಂದೆ ವಿಚಾರಣೆಗೆ ರಾಬರ್ಟ್ ವಾದ್ರಾ ಹಾಜರು

ಈ ಪ್ರಕರಣದಲ್ಲಿ ಏಪ್ರಿಲ್ 8 ರಂದು ರಾಬರ್ಟ್ ವಾದ್ರಾ ಅವರಿಗೆ ಮೊದಲು ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಲಿಲ್ಲ ಮತ್ತೊಂದು ದಿನಾಂಕವನ್ನು ಕೋರಿದ್ದರು.

ನವದೆಹಲಿ: ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಾವ, ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಉದ್ಯಮಿ ರಾಬರ್ಟ್ ವಾದ್ರಾ ಅವರು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಇಂದು ಹಾಜರಾದರು.

56 ವರ್ಷದ ರಾಬರ್ಟ್ ವಾದ್ರಾ ತಮ್ಮ ಭದ್ರತಾ ಸಿಬ್ಬಂದಿ ಮತ್ತು ಮಾಧ್ಯಮ ಸಿಬ್ಬಂದಿಯೊಂದಿಗೆ ಕೇಂದ್ರ ದೆಹಲಿಯ ಸುಜನ್ ಸಿಂಗ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಸುಮಾರು 2 ಕಿ.ಮೀ ನಡೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ ದ್ವೇಷದ ಹೊರತಾಗಿ ಬೇರೇನೂ ಅಲ್ಲ. ನಾನು ಅಲ್ಪಸಂಖ್ಯಾತರ ಪರವಾಗಿ ಮಾತನಾಡುವಾಗಲೆಲ್ಲಾ ಅವರು ನನ್ನನ್ನು ತಡೆಯಲು, ನಮ್ಮನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾರೆ. ಸಂಸತ್ತಿನಲ್ಲಿಯೂ ರಾಹುಲ್ ಗಾಂಧಿ ಅವರನ್ನು ತಡೆಯಲು ಪ್ರಯತ್ನಿಸಿದರು. ಇದು ತನಿಖಾ ಏಜೆನ್ಸಿಗಳ ದುರುಪಯೋಗ ಮತ್ತು ರಾಜಕೀಯ ದ್ವೇಷ ಎಂದು ಆರೋಪಿಸಿದರು.

ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಈ ಪ್ರಕರಣದಲ್ಲಿ ಏಪ್ರಿಲ್ 8 ರಂದು ರಾಬರ್ಟ್ ವಾದ್ರಾ ಅವರಿಗೆ ಮೊದಲು ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಲಿಲ್ಲ ಮತ್ತೊಂದು ದಿನಾಂಕವನ್ನು ಕೋರಿದ್ದರು.

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧದ ತನಿಖೆಯು ಹರಿಯಾಣದ ಶಿಕೋಹ್‌ಪುರದಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದೆ.

ಈ ತನಿಖೆಯು ಫೆಬ್ರವರಿ 2008 ರಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದೆ, ಅಲ್ಲಿ ವಾದ್ರಾಗೆ ಸಂಬಂಧಿಸಿದ ಸ್ಕೈಲೈಟ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯು ಗುರುಗ್ರಾಮ್‌ನ ಶಿಕೋಹ್‌ಪುರದಲ್ಲಿ 3.5 ಎಕರೆ ಭೂಮಿಯನ್ನು ಓಂಕಾರೇಶ್ವರ ಪ್ರಾಪರ್ಟೀಸ್ ಎಂಬ ಸಂಸ್ಥೆಯಿಂದ 7.5 ಕೋಟಿ ರೂಪಾಯಿಗೆ ಖರೀದಿಸಿತು. ಈ ಭೂಮಿಯನ್ನು ಕೆಲವೇ ಗಂಟೆಗಳಲ್ಲಿ ಬದಲಾವಣೆ ಮಾಡಲಾಗಿತ್ತು ಎಂಬ ಆರೋಪವಿದೆ.

ಈ ಒಪ್ಪಂದದ ಕುರಿತು ಹರಿಯಾಣ ಪೊಲೀಸರು 2018 ರಲ್ಲಿ ಪ್ರಕರಣ ದಾಖಲಿಸಿದ್ದರು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಅವರ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ಬೇರೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಫೆಡರಲ್ ತನಿಖಾ ಸಂಸ್ಥೆಯಿಂದ ರಾಬರ್ಟ್ ವಾದ್ರಾ ಅವರನ್ನು ಹಲವು ಬಾರಿ ಪ್ರಶ್ನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT