ಅಲಹಾಬಾದ್ ಹೈಕೋರ್ಟ್ 
ದೇಶ

'ಸಮಾಜವನ್ನು ಎದುರಿಸಲು ಕಲಿಯಿರಿ': ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ದಂಪತಿಗೆ ಪೊಲೀಸ್ ರಕ್ಷಣೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರ!

ಕುಟುಂಬದ ವಿರುದ್ಧವಾಗಿ ತಮ್ಮ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗುವ ದಂಪತಿಗಳಿಗೆ ಅವರ ಜೀವ ಮತ್ತು ಸ್ವಾತಂತ್ರ್ಯದ ಮೇಲೆ ನಿಜವಾದ ಬೆದರಿಕೆ ಇಲ್ಲದಿದ್ದರೆ ರಕ್ಷಣೆ ನೀಡಲಾಗದು ಎಂದಿದೆ.

ಲಖನೌ: ಹಲವು ಭಿನ್ನ, ವಿಭಿನ್ನ ತೀರ್ಪುಗಳ ಮೂಲಕ ದೇಶದ ಗಮನ ಸೆಳೆದಿರುವ ಅಲಹಾಬಾದ್ ಹೈಕೋರ್ಟ್ ಮತ್ತೊಂದು ಇಂತಹುದೇ ಮಹತ್ವದ ತೀರ್ಪು ನೀಡಿದೆ.

ಕುಟುಂಬದ ವಿರುದ್ಧವಾಗಿ ತಮ್ಮ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗುವ ದಂಪತಿಗಳಿಗೆ ಅವರ ಜೀವ ಮತ್ತು ಸ್ವಾತಂತ್ರ್ಯದ ಮೇಲೆ ನಿಜವಾದ ಭಯ ಇಲ್ಲದಿದ್ದರೆ ರಕ್ಷಣೆ ನೀಡಲಾಗದು ಎಂದಿದೆ.

ಈ ತಿಂಗಳ ಆರಂಭದಲ್ಲಿ ಈ ತೀರ್ಪು ನೀಡಿದ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ, ತಮ್ಮ ಇಚ್ಚೆಯಂತೆ ಮದುವೆಯಾದ ದಂಪತಿಗಳು ನ್ಯಾಯಾಲಯದ ಮೂಲಕ ಸುರಕ್ಷತೆ ಪಡೆಯಬಹುದು. ಆದರೆ ಯಾವುದೇ ಬೆದರಿಕೆ ಗ್ರಹಿಕೆ ಇಲ್ಲದಿದ್ದಲ್ಲಿ, ಅಂತಹ ದಂಪತಿಗಳು "ಪರಸ್ಪರ ಬೆಂಬಲಿಸುವ ಮತ್ತು ಸಮಾಜವನ್ನು ಎದುರಿಸುವುದನ್ನು ಕಲಿಯಬೇಕು" ಎಂದು ಹೇಳಿದರು.

ತಮ್ಮ ಶಾಂತಿಯುತ ವೈವಾಹಿಕ ಬದುಕಿನಲ್ಲಿ ಮಧ್ಯಪ್ರವೇಶಿಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಹಾಗೂ ತಮಗೆ ಪೊಲೀಸ್ ರಕ್ಷಣೆ ಬೇಕೆಂದು ಶ್ರೇಯಾ ಕೇಸರ್ವಾಣಿ ಮತ್ತು ಅವರ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಶ್ರೀವಾಸ್ತವ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಆದಾಗ್ಯೂ, ಅವರ ಮನವಿಗಳನ್ನು ಆಲಿಸಿದ ನ್ಯಾಯಾಲಯ, ಅರ್ಜಿದಾರರಿಗೆ ಯಾವುದೇ ಗಂಭೀರ ಬೆದರಿಕೆ ಗ್ರಹಿಕೆ ಇಲ್ಲ ಎಂದು ಹೇಳುವ ಮೂಲಕ ಅರ್ಜಿ ವಿಲೇವಾರಿ ಮಾಡಿತು.

ಅರ್ಜಿದಾರರ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಅಪಾಯವಿದೆ ಎಂದು ತೀರ್ಮಾನಿಸಲು ಯಾವುದೇ ಸಾಕ್ಷ್ಯ ಇಲ್ಲ ಎಂಬುದನ್ನು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಖಾಸಗಿ ಪ್ರತಿವಾದಿಗಳು ಅರ್ಜಿದಾರರಿಗೆ ದೈಹಿಕ ಅಥವಾ ಮಾನಸಿಕವಾಗಿ ಹಲ್ಲೆ ಮಾಡುವ ಸಾಧ್ಯತೆಯಿದೆ ಎಂದು ಸಾಬೀತುಪಡಿಸಲು ಒಂದು ಸಣ್ಣ ಸಾಕ್ಷ್ಯವೂ ಇಲ್ಲ ಎಂದು ನ್ಯಾಯಾಧೀಶರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT