ಕೊಲೆಯಾದ ಸ್ಟುವರ್ಟ್ ಸ್ಟೇನ್ಸ್ ಹಾಗೂ ಜೈಲಿನಿಂದ ಬಿಡುಗಡೆಯಾದ ಹೆಂಬ್ರಾಮ್ ಚಿತ್ರ 
ದೇಶ

ತ್ರಿವಳಿ ಕೊಲೆ ಪ್ರಕರಣ: 25 ವರ್ಷಗಳ ನಂತರ ದಾರಾ ಸಿಂಗ್ ಸಹಚರ ಜೈಲಿನಿಂದ ಬಿಡುಗಡೆ!

ಸೆರೆವಾಸದ ವೇಳೆ ತೋರಿದ ಉತ್ತಮ ನಡವಳಿಕೆಯ ಆಧಾರದ ಮೇಲೆ ಈಗ 50 ವರ್ಷ ಆಗಿರುವ ಹೆಂಬ್ರಾಮ್ ಜೈಲಿನಿಂದ ಬಿಡುಗಡೆಗೊಂಡರು.

ಒಡಿಶಾ: ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಹಾಗೂ ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರರನ್ನು ಹತ್ಯೆ ಮಾಡಿದ ಅಪರಾಧಿ ದಾರಾ ಸಿಂಗ್ ಅವರ ಸಹಚರ ಮಹೇಂದ್ರ ಹೆಂಬ್ರಾಮ್ 25 ವರ್ಷಗಳ ಶಿಕ್ಷೆಯ ನಂತರ ಬುಧವಾರ ಒಡಿಶಾದ ಕಿಯೋಂಜಾರ್ ಜೈಲಿನಿಂದ ಬಿಡುಗಡೆಯಾದರು.

ಸೆರೆವಾಸದ ವೇಳೆ ತೋರಿದ ಉತ್ತಮ ನಡವಳಿಕೆಯ ಆಧಾರದ ಮೇಲೆ ಈಗ 50 ವರ್ಷ ಆಗಿರುವ ಹೆಂಬ್ರಾಮ್ ಜೈಲಿನಿಂದ ಬಿಡುಗಡೆಗೊಂಡರು.

"ರಾಜ್ಯ ಶಿಕ್ಷೆ ಪರಿಶೀಲನಾ ಮಂಡಳಿಯ ನಿರ್ಧಾರದ ಮೇರೆಗೆ ಹೆಂಬ್ರಾಮ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಕಾರಾಗೃಹ ನಿರ್ದೇಶನಾಲಯ ಪತ್ರದಲ್ಲಿ ತಿಳಿಸಿದೆ. 25 ವರ್ಷಗಳ ನಂತರ ನಿಯಮಗಳಿಗೆ ಅನುಸಾರವಾಗಿ ಉತ್ತಮ ನಡವಳಿಕೆಯಿಂದಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ" ಎಂದು ಜೈಲರ್ ಮನಸ್ವಿನಿ ನಾಯ್ಕ್ ಹೇಳಿದ್ದಾರೆ.

ಹೆಂಬ್ರಾಮ್‌ಗೆ ಬ್ಯಾಂಕ್ ಪಾಸ್‌ಬುಕ್ ಹಸ್ತಾಂತರಿಸಲಾಗಿದೆ. ಅದರಲ್ಲಿ ಅವರು ಜೈಲಿನಲ್ಲಿದ್ದಾಗ ಗಳಿಸಿದ ಹಣವನ್ನು ಠೇವಣಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಘಟನೆಯಲ್ಲಿ ತಪ್ಪಾಗಿ ಸಿಲುಕಿಸಿ ನಾನು 25 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದು, ಇಂದು ಬಿಡುಗಡೆಯಾಗಿದ್ದೇನೆ ಎಂದು ಹೆಂಬ್ರಾಮ್ ಜೈಲಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಜನವರಿ 21, 1999 ರಂದು ಕಿಯೊಂಜಾರ್ ಜಿಲ್ಲೆಯ ಮನೋಹರ್ ಪುರ ಗ್ರಾಮದಲ್ಲಿ ಚರ್ಚ್ ಮುಂಭಾಗದಲ್ಲಿ ನಿಲ್ಲಿಸಿದ್ದ ವಾಹನದಲ್ಲಿ ಮಲಗಿದ್ದಾಗ ಸ್ಟೇನ್ಸ್ ಹಾಗೂ ಅವರ ಪುತ್ರರಾದ ಫಿಲಿಪ್ (10) ಮತ್ತು ತಿಮೋತಿ (6) ಅವರನ್ನು ಕ್ರೂರವಾಗಿ ಹತ್ಯೆಗೈದ ಆರೋಪದಲ್ಲಿ ಹೆಂಬ್ರಾಮ್ ಮತ್ತು ದಾರಾ ಸಿಂಗ್, ಅಲಿಯಾಸ್ ರವೀಂದ್ರ ಪಾಲ್ ಸಿಂಗ್ ಅವರನ್ನು ದೋಷಿಗಳೆಂದು ಘೋಷಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT