ಕೊಲೆಯಾದ ಸ್ಟುವರ್ಟ್ ಸ್ಟೇನ್ಸ್ ಹಾಗೂ ಜೈಲಿನಿಂದ ಬಿಡುಗಡೆಯಾದ ಹೆಂಬ್ರಾಮ್ ಚಿತ್ರ 
ದೇಶ

ತ್ರಿವಳಿ ಕೊಲೆ ಪ್ರಕರಣ: 25 ವರ್ಷಗಳ ನಂತರ ದಾರಾ ಸಿಂಗ್ ಸಹಚರ ಜೈಲಿನಿಂದ ಬಿಡುಗಡೆ!

ಸೆರೆವಾಸದ ವೇಳೆ ತೋರಿದ ಉತ್ತಮ ನಡವಳಿಕೆಯ ಆಧಾರದ ಮೇಲೆ ಈಗ 50 ವರ್ಷ ಆಗಿರುವ ಹೆಂಬ್ರಾಮ್ ಜೈಲಿನಿಂದ ಬಿಡುಗಡೆಗೊಂಡರು.

ಒಡಿಶಾ: ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಹಾಗೂ ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರರನ್ನು ಹತ್ಯೆ ಮಾಡಿದ ಅಪರಾಧಿ ದಾರಾ ಸಿಂಗ್ ಅವರ ಸಹಚರ ಮಹೇಂದ್ರ ಹೆಂಬ್ರಾಮ್ 25 ವರ್ಷಗಳ ಶಿಕ್ಷೆಯ ನಂತರ ಬುಧವಾರ ಒಡಿಶಾದ ಕಿಯೋಂಜಾರ್ ಜೈಲಿನಿಂದ ಬಿಡುಗಡೆಯಾದರು.

ಸೆರೆವಾಸದ ವೇಳೆ ತೋರಿದ ಉತ್ತಮ ನಡವಳಿಕೆಯ ಆಧಾರದ ಮೇಲೆ ಈಗ 50 ವರ್ಷ ಆಗಿರುವ ಹೆಂಬ್ರಾಮ್ ಜೈಲಿನಿಂದ ಬಿಡುಗಡೆಗೊಂಡರು.

"ರಾಜ್ಯ ಶಿಕ್ಷೆ ಪರಿಶೀಲನಾ ಮಂಡಳಿಯ ನಿರ್ಧಾರದ ಮೇರೆಗೆ ಹೆಂಬ್ರಾಮ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಕಾರಾಗೃಹ ನಿರ್ದೇಶನಾಲಯ ಪತ್ರದಲ್ಲಿ ತಿಳಿಸಿದೆ. 25 ವರ್ಷಗಳ ನಂತರ ನಿಯಮಗಳಿಗೆ ಅನುಸಾರವಾಗಿ ಉತ್ತಮ ನಡವಳಿಕೆಯಿಂದಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ" ಎಂದು ಜೈಲರ್ ಮನಸ್ವಿನಿ ನಾಯ್ಕ್ ಹೇಳಿದ್ದಾರೆ.

ಹೆಂಬ್ರಾಮ್‌ಗೆ ಬ್ಯಾಂಕ್ ಪಾಸ್‌ಬುಕ್ ಹಸ್ತಾಂತರಿಸಲಾಗಿದೆ. ಅದರಲ್ಲಿ ಅವರು ಜೈಲಿನಲ್ಲಿದ್ದಾಗ ಗಳಿಸಿದ ಹಣವನ್ನು ಠೇವಣಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಘಟನೆಯಲ್ಲಿ ತಪ್ಪಾಗಿ ಸಿಲುಕಿಸಿ ನಾನು 25 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದು, ಇಂದು ಬಿಡುಗಡೆಯಾಗಿದ್ದೇನೆ ಎಂದು ಹೆಂಬ್ರಾಮ್ ಜೈಲಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಜನವರಿ 21, 1999 ರಂದು ಕಿಯೊಂಜಾರ್ ಜಿಲ್ಲೆಯ ಮನೋಹರ್ ಪುರ ಗ್ರಾಮದಲ್ಲಿ ಚರ್ಚ್ ಮುಂಭಾಗದಲ್ಲಿ ನಿಲ್ಲಿಸಿದ್ದ ವಾಹನದಲ್ಲಿ ಮಲಗಿದ್ದಾಗ ಸ್ಟೇನ್ಸ್ ಹಾಗೂ ಅವರ ಪುತ್ರರಾದ ಫಿಲಿಪ್ (10) ಮತ್ತು ತಿಮೋತಿ (6) ಅವರನ್ನು ಕ್ರೂರವಾಗಿ ಹತ್ಯೆಗೈದ ಆರೋಪದಲ್ಲಿ ಹೆಂಬ್ರಾಮ್ ಮತ್ತು ದಾರಾ ಸಿಂಗ್, ಅಲಿಯಾಸ್ ರವೀಂದ್ರ ಪಾಲ್ ಸಿಂಗ್ ಅವರನ್ನು ದೋಷಿಗಳೆಂದು ಘೋಷಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT