ಸಾಂದರ್ಭಿಕ ಚಿತ್ರ  
ದೇಶ

Chhattisgarh ಎನ್ ಕೌಂಟರ್: ಇಬ್ಬರು ಕಟ್ಟಾ ನಕ್ಸಲರ ಹತ್ಯೆ

ಕೊಂಡಗಾಂವ್‌ನಿಂದ ರಾಜ್ಯ ಪೊಲೀಸರ ಎರಡೂ ಘಟಕಗಳಾದ ಜಿಲ್ಲಾ ಮೀಸಲು ಪಡೆ (DRG) ಮತ್ತು ಬಸ್ತಾರ್ ಫೈಟರ್ಸ್‌ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿದರು.

ರಾಯ್‌ಪುರ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಪೊಲೀಸರಿಗೆ ಬೇಕಾಗಿದ್ದ ಸಿಕ್ಕಿಬಿದ್ದರೆ 13 ಲಕ್ಷ ರೂಪಾಯಿ ಸಾಮೂಹಿಕ ಬಹುಮಾನ ಘೋಷಣೆಯಾಗಿದ್ದ ಇಬ್ಬರು ಕಟ್ಟಾ ನಕ್ಸಲರನ್ನು ಭದ್ರತಾ ಪಡೆಗಳು ಇಂದು ನಸುಕಿನ ಜಾವ ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ.

ನಿನ್ನೆ ಸಂಜೆ ಕೊಂಡಗಾಂವ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಕಿಲಾಮ್-ಬರ್ಗಮ್ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ತಿಳಿಸಿದ್ದಾರೆ.

ಕೊಂಡಗಾಂವ್‌ನಿಂದ ರಾಜ್ಯ ಪೊಲೀಸರ ಎರಡೂ ಘಟಕಗಳಾದ ಜಿಲ್ಲಾ ಮೀಸಲು ಪಡೆ (DRG) ಮತ್ತು ಬಸ್ತಾರ್ ಫೈಟರ್ಸ್‌ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿದರು.

ಇಲ್ಲಿಯವರೆಗೆ, ಇಬ್ಬರು ನಕ್ಸಲರ ಮೃತದೇಹಗಳು, ಒಂದು ಎಕೆ-47 ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಹತ್ಯೆಗೊಳಗಾದ ನಕ್ಸಲರನ್ನು ಮಾವೋವಾದಿಗಳ ಪೂರ್ವ ಬಸ್ತಾರ್ ವಿಭಾಗದ ಮಾವೋವಾದಿ ಕಮಾಂಡರ್ ಹಲ್ದಾರ್ ಮತ್ತು ಪ್ರದೇಶ ಸಮಿತಿ ಸದಸ್ಯ ರಾಮೆ ಎಂದು ಗುರುತಿಸಲಾಗಿದೆ. ಹಲ್ದಾರ್ ಮತ್ತು ರಾಮೆ ಅವರ ತಲೆಗೆ ಕ್ರಮವಾಗಿ 8 ಲಕ್ಷ ಮತ್ತು 5 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿತ್ತು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 140 ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ನಾರಾಯಣಪುರ ಮತ್ತು ಕೊಂಡಗಾಂವ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 123 ನಕ್ಸಲರನ್ನು ನಿರ್ಮೂಲನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT