ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ ವಿಧಾನಸಭಾ ಚುನಾವಣೆ: ನಿತೀಶ್ ಕುಮಾರ್ NDA ಸಿಎಂ ಅಭ್ಯರ್ಥಿ!

ಚುನಾವಣೆ ನಂತರ ನಿತೀಶ್ ಕುಮಾರ್ ಎನ್‌ಡಿಎ ಸಿಎಂ ಆಗ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಪ್ತರಾಗಿರುವ ಬಿಜೆಪಿಯ ಹಿರಿಯ ನಾಯಕ ರೈ ಹೇಳಿದ್ದಾರೆ.

ಪಾಟ್ನಾ: 2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಗುರುವಾರ ಹೇಳಿದ್ದಾರೆ.

ಚುನಾವಣೆ ನಂತರ ನಿತೀಶ್ ಕುಮಾರ್ ಎನ್‌ಡಿಎ ಸಿಎಂ ಆಗ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಪ್ತರಾಗಿರುವ ಬಿಜೆಪಿಯ ಹಿರಿಯ ನಾಯಕ ರೈ ಹೇಳಿದ್ದಾರೆ.

ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ಚುನಾವಣೆಗೂ ಮುನ್ನ ಎನ್‌ಡಿಎ ಸಿಎಂ ಅಭ್ಯರ್ಥಿ ಕುರಿತು ನಡೆಯುತ್ತಿರುವ ಊಹಾಪೋಹಗಳ ಮಧ್ಯೆ ರೈ ಅವರ ಹೇಳಿಕೆಯು ರಾಜಕೀಯ ಮಹತ್ವವನ್ನು ಪಡೆದಿದೆ.

ಬಿಜೆಪಿಯ ವರಿಷ್ಠರು ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲು ಹಿಂಜರಿಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತಿತ್ತು. ಈ ಊಹಾಪೋಹಗಳಿಗೆ ನಿತ್ಯಾನಂದ ರೈ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಮಾನಸಿಕ ಆರೋಗ್ಯ ಮತ್ತು ಜನಪ್ರಿಯತೆ ಕುಸಿತದ ವರದಿ ನಡುವೆಯೂ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿಯೇ ಎನ್ ಡಿಎ ಚುನಾವಣೆ ಎದುರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪದೇ ಪದೇ ಹೇಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT