ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಪ್ರಿಯಕರನನ್ನು ಮನೆಗೆ ಕರೆಸಿ ಮರ್ಮಾಂಗ ಕತ್ತರಿಸಿ ಚಿತ್ರಹಿಂಸೆ ಕೊಟ್ಟ ಪ್ರಿಯತಮೆ!

ಪ್ರಿಯಕರ ಮಿಥುನ್ ಕುಮಾರ್ ನನ್ನು ಮನೆಗೆ ಕರೆಸಿಕೊಂಡ ಯುವತಿ ಮತ್ತು ಆಕೆಯ ನಾಲ್ವರು ಸಹೋದರರು ಸೇರಿ ಗುಪ್ತಾಂಗ ಕತ್ತರಿಸಿದ್ದಲ್ಲದೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶ: ಯುವತಿಯೊಬ್ಬಳು ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದಿದೆ.

ಪ್ರಿಯಕರ ಮಿಥುನ್ ಕುಮಾರ್ ನನ್ನು ಮನೆಗೆ ಕರೆಸಿಕೊಂಡ ಯುವತಿ ಮತ್ತು ಆಕೆಯ ನಾಲ್ವರು ಸಹೋದರರು ಸೇರಿ ಗುಪ್ತಾಂಗ ಕತ್ತರಿಸಿದ್ದಲ್ಲದೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕನ ಕುಟುಂಬದವರು ಇದನ್ನು ಲವ್ ಟ್ರ್ಯಾಪ್ ಎಂದು ಕರೆದಿದ್ದಾರೆ. ಎರಡು ಕುಟುಂಬಗಳ ನಡುವೆ ಈಗಾಗಲೇ ದ್ವೇಷವಿತ್ತು.

ಆದರೆ ಯುವತಿ ಆತ ತನ್ನ ಮನೆಗೆ ನುಗ್ಗಿದ್ದ, ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದ ಆಗ ಅನಿವಾರ್ಯವಾಗಿ ಈ ರೀತಿ ಮಾಡಬೇಕಾಯಿತು ಎಂದು ಹೇಳಿಕೆ ನೀಡಿದ್ದಾಳೆ. ಮಿಥುನ್ ಕುಮಾರ್ ಎಂಬಾತ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿದ್ದ.

ಆಕೆಯ ಆತನಿಗಿಂತ 8 ವರ್ಷ ದೊಡ್ಡವಳು. ಆಕೆ ಎರಡು ವರ್ಷಗಳಿಂದ ಮಿಥುನ್ ಜತೆ ಸಂಪರ್ಕದಲ್ಲಿದ್ದಾಳೆ. ಆತ ಹೊಲದಿಂದ ವಾಪಸಾಗುವಾಗ ಆಕೆ ಆತನಿಗೆ ಕರೆ ಮಾಡಿ ಭೇಟಿಯಾಗುವಂತೆ ತಿಳಿಸಿದ್ದಾಳೆ ಎಂದು ಮಿಥುನ್ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮಿಥುನ್‌ಗೆ ತಿಳಿಯದೆ ಅಲ್ಲಿಗೆ ಹೋಗಿದ್ದಾನೆ, ಆಗ ಯುವತಿಯ ನಾಲ್ವರು ಸಹೋದರರು ಅಲ್ಲೇ ಕಾಯುತ್ತಿದ್ದರು ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಅವರು ಮಿಥುನ್​ನನ್ನು ಹಿಡಿದು, ನಿಂದಿಸಿ, ತೀವ್ರವಾಗಿ ಥಳಿಸಿದ್ದಾರೆ. ಸಹೋದರರು ಮಿಥುನ್‌ನ ಕೈ ಮತ್ತು ಕಾಲುಗಳನ್ನು ಕಟ್ಟಿದ್ದರು, ನಂತರ ಆಕೆ ಬ್ಲೇಡ್‌ನಿಂದ ಗುಪ್ತಾಂಗ ಕತ್ತರಿಸಿದ್ದಾಳೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಯಿತು, ನಂತರ ಆರೋಪಿಗಳು ಮಿಥುನ್‌ನನ್ನು ಮನೆಯಿಂದ ಹೊರಗೆ ಎಸೆದಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ನೋಡಿದ ಗ್ರಾಮಸ್ಥರೊಬ್ಬರು ಆತನ ತಂದೆಗೆ ಮಾಹಿತಿ ನೀಡಿದರು. ಬಸಂತ್ ಲಾಲ್ ತನ್ನ ಮಗನನ್ನು ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ಮಿಥುನ್ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಎರಡು ಕಡೆಯವರ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT