ಕಪಿಲ್ ಸಿಬಲ್, ಜಗದೀಪ್ ಧಂಕರ್ Photo | PTI
ದೇಶ

'ಸುಪ್ರೀಂ ಕೋರ್ಟ್ ಸೂಪರ್ ಪಾರ್ಲಿಮೆಂಟ್ ಆಗಿದೆ' ಎಂದ ಉಪ ರಾಷ್ಟ್ರಪತಿ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ; Video

ಯಾವುದೇ ರಾಜ್ಯಸಭಾ ಅಧ್ಯಕ್ಷರು ಈ ರೀತಿಯ "ರಾಜಕೀಯ ಹೇಳಿಕೆ" ನೀಡಿರುವುದನ್ನು ನಾನು ಯಾವತ್ತೂ ನೋಡಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಮಸೂದೆಗಳ ಕುರಿತು ನಿರ್ಧರಿಸಲು ರಾಷ್ಟ್ರಪತಿಗಳಿಗೆ ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ ತೀರ್ಪು ಪ್ರಶ್ನಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ಇದು "ಅಸಂವಿಧಾನಿಕ" ಮತ್ತು ಯಾವುದೇ ರಾಜ್ಯಸಭಾ ಅಧ್ಯಕ್ಷರು ಈ ರೀತಿಯ "ರಾಜಕೀಯ ಹೇಳಿಕೆ" ನೀಡಿರುವುದನ್ನು ನಾನು ಯಾವತ್ತೂ ನೋಡಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಧನಕರ್ ಅವರು ನ್ಯಾಯಾಂಗವನ್ನು ಕಟುವಾಗಿ ಟೀಕಿಸಿದ ಒಂದು ದಿನದ ನಂತರ ಪ್ರತಿಕ್ರಿಯಿಸಿದ ಸಿಬಲ್, ಲೋಕಸಭಾ ಸ್ಪೀಕರ್ ಮತ್ತು ರಾಜ್ಯಸಭಾ ಅಧ್ಯಕ್ಷರು, ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ಸಮಾನ ಅಂತರ ಕಾಯ್ದುಕೊಳ್ಳುತ್ತಾರೆ. ಅವರು "ಪಕ್ಷದ ವಕ್ತಾರ" ಆಗಲು ಸಾಧ್ಯವಿಲ್ಲ ಎಂದಿದ್ದಾರೆ.

"ಲೋಕಸಭಾ ಸ್ಪೀಕರ್ ಅವರ ಕುರ್ಚಿ ಸದನದ ಮಧ್ಯದಲ್ಲಿ ಇದೆ ಎಂದು ಎಲ್ಲರಿಗೂ ಗೊತ್ತು. ಅವರು ಒಂದು ಪಕ್ಷದ ಸ್ಪೀಕರ್ ಅಲ್ಲ. ಅವರು ಮತ ಚಲಾಯಿಸುವುದಿಲ್ಲ, ಅವರು ಟೈ ಇದ್ದಾಗ ಮಾತ್ರ ಮತ ಚಲಾಯಿಸುತ್ತಾರೆ. ಮೇಲ್ಮನೆಯಲ್ಲೂ ಅದೇ ಆಗಿದೆ. ನೀವು ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ಸಮಾನ ಅಂತರ ಕಾಯ್ದುಕೊಳ್ಳಬೇಕು" ಎಂದು ಹಿರಿಯ ವಕೀಲರು ಇಂದು ಪತ್ರಿಕಾಗೋಷ್ಠಿಯಲ್ಲಿ ಧನಕರ್ ಅವರಿಗೆ ತಿರುಗೇಟು ನೀಡಿದರು.

"ನೀವು ನೀಡುವ ಪ್ರತಿಯೊಂದು ಹೇಳಿಕೆಯೂ ಸಮಾನ ಅಂತರದಲ್ಲಿರಬೇಕು. ನೀವು ಒಂದು ಪಕ್ಷದ ವಕ್ತಾರರಾಗಲು ಸಾಧ್ಯವಿಲ್ಲ. ರಾಜ್ಯಸಭಾ ಅಧ್ಯಕ್ಷರು ಅಥವಾ ಸ್ಪೀಕರ್ ಯಾವುದೇ ಪಕ್ಷದ ವಕ್ತಾರರಾಗಲು ಸಾಧ್ಯವಿಲ್ಲ. ಅವರು ಹಾಗೆ ಮಾಡಿದರೆ ಆ ಕುರ್ಚಿಯ ಘನತೆ ಕಡಿಮೆಯಾಗುತ್ತದೆ" ಎಂದು ಸಿಬಲ್ ಪ್ರತಿಪಾದಿಸಿದರು.

ಮಸೂದೆಗಳ ಕುರಿತು ನಿರ್ಧರಿಸಲು ರಾಷ್ಟ್ರಪತಿಗಳಿಗೆ ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ನಿನ್ನೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಜಗದೀಪ್ ಧನಕರ್ ಅವರು, "ನ್ಯಾಯಾಲಯಗಳು ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ" ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ನಮ್ಮಲ್ಲಿ ಶಾಸನ ರಚಿಸುವ, ಕಾರ್ಯಕಾರಿ ಕಾರ್ಯಗಳನ್ನು ನಿರ್ವಹಿಸುವ, ಸೂಪರ್ ಪಾರ್ಲಿಮೆಂಟ್ ಆಗಿ ಕಾರ್ಯನಿರ್ವಹಿಸುವ ನ್ಯಾಯಾಧೀಶರೂ ಇದ್ದಾರೆ ಮತ್ತು ಅವರಿಗೆ ಯಾವುದೇ ಹೊಣೆಗಾರಿಕೆ ಇಲ್ಲ. ಏಕೆಂದರೆ ಈ ನೆಲದ ಕಾನೂನು ಅವರಿಗೆ ಅನ್ವಯಿಸುವುದಿಲ್ಲ" ಎಂದು ನ್ಯಾಯಾಂಗದ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT