ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ 2025 ಅನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿರುವುದು  
ದೇಶ

ಸುಪ್ರೀಂ ಕೋರ್ಟ್ ನಿಲುವನ್ನು ಸ್ವಾಗತಿಸಿದ ವಿರೋಧಪಕ್ಷಗಳು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮುಂದುವರಿಸಲು ನಿರ್ಧಾರ

ಕಾಂಗ್ರೆಸ್‌ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಇಮ್ರಾನ್ ಪ್ರತಾಪ್‌ಗಢಿ, ಈ ಮಹತ್ವದ ವಿಷಯವನ್ನು ಆಲಿಸಲು ಸಮಯ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದರು.

ನವದೆಹಲಿ: ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸ್ವಾಗತಿಸಿದ್ದು, ಸಂವಿಧಾನಬಾಹಿರ ಶಾಸನದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಾದಿಸಿವೆ.

ಸುಪ್ರೀಂ ಕೋರ್ಟ್‌ನ ಅವಲೋಕನಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ವಕ್ಫ್ ತಿದ್ದುಪಡಿ ಕಾಯ್ದೆಯು ಕೇವಲ 'ಕಾನೂನುಬದ್ಧವಾಗಿ ದೋಷಪೂರಿತವಲ್ಲ, ಬದಲಾಗಿ ನೈತಿಕವಾಗಿ ಶೂನ್ಯವಾಗಿದೆ ಮತ್ತು ಅದು ಸಂವಿಧಾನದ ಆತ್ಮದ ಮೇಲೆಯೇ ದಾಳಿ ಮಾಡುತ್ತಿದೆ ಎಂದು ಹೇಳಿದೆ.

ಕಾಂಗ್ರೆಸ್ ಸಂಸದ ಅಭಿಷೇಕ್ ಸಿಂಘ್ವಿ, ಕಾನೂನು ಸುಧಾರಣೆಯ ಹೆಸರಿನಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ವಕ್ಪ್ ತಿದ್ದುಪಡಿ ಕಾಯ್ದೆ ದಾಳಿ ಮಾಡುತ್ತದೆ ಮತ್ತು ಸಂವಿಧಾನದ ನಿರ್ಮಾತೃಗಳು ಇದನ್ನು ಊಹಿಸಿರಲಿಲ್ಲವಾದ್ದರಿಂದ ಪಕ್ಷವು ಇದು ಜಾರಿಗೆ ಬರಲು ಬಿಡುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್‌ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಇಮ್ರಾನ್ ಪ್ರತಾಪ್‌ಗಢಿ, ಈ ಮಹತ್ವದ ವಿಷಯವನ್ನು ಆಲಿಸಲು ಸಮಯ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದರು. ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಪ್ರಕರಣದಲ್ಲಿ ವಾದ ಮಂಡಿಸಿದ ಅಭಿಷೇಕ್ ಸಿಂಗ್ವಿ, ಸಾಂವಿಧಾನಿಕ ಹಕ್ಕುಗಳು ಬಹುಸಂಖ್ಯಾತರಿಗೆ ವಿರುದ್ಧವಾಗಿವೆ ಎಂಬುದನ್ನು ಜನರು ಮರೆತುಬಿಡುತ್ತಾರೆ ಏಕೆಂದರೆ ಇಲ್ಲದಿದ್ದರೆ ಹಕ್ಕುಗಳ ಅಗತ್ಯವಿರುವುದಿಲ್ಲ ಎಂದಿದ್ದಾರೆ.

ಇದು ಸುಧಾರಣೆಯಲ್ಲ. ಇದು ಸುಧಾರಣೆಯ ಸೋಗಿನಲ್ಲಿ ಪ್ರತೀಕಾರದ ಕ್ರಮವಾಗಿದೆ. ಪ್ರತೀಕಾರವನ್ನು ಸೂಕ್ಷ್ಮವಾಗಿ ಸರ್ಕಾರ ನಿರ್ಮಿಸಿದೆ, ಕಾರ್ಯತಂತ್ರದ ಸಮಯಕ್ಕೆ ಅನುಗುಣವಾಗಿ ಮತ್ತು ಸಾಂವಿಧಾನಿಕವಾಗಿ ಪ್ರಶ್ನಾರ್ಹವಾಗಿದೆ. ವಕ್ಫ್ ಕಾಯ್ದೆಯು ದಕ್ಷತೆಯ ಕ್ರಮವಲ್ಲ ಎಂದು ಸಿಂಘ್ವಿ ಹೇಳಿದ್ದಾರೆ.

ಈ ಕಾಯ್ದೆಯನ್ನು ನಾವು ಸಂವಿಧಾನಬಾಹಿರವೆಂದು ಪರಿಗಣಿಸುತ್ತೇವೆ. ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಯನ್ನು ರಚಿಸಲಾಗುವುದಿಲ್ಲ. ಬಳಕೆದಾರರಿಂದ ವಕ್ಫ್ ನ್ನು ಅಳಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಎನ್ ಡಿಎ ಮೈತ್ರಿಕೂಟ ವಿರುದ್ಧ ಇಂಡಿಯಾ ಬ್ಲಾಕ್ ಆಕ್ರೋಶ

ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ತಡೆಹಿಡಿದಿರುವುದರಿಂದ, ವಿರೋಧ ಪಕ್ಷಗಳು ಎನ್ ಡಿಎ ಮಿತ್ರಪಕ್ಷಗಳಾದ ಜನತಾದಳ (ಯುನೈಟೆಡ್), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮೇಲೆ ದಾಳಿ ಮಾಡಲು ಅವಕಾಶಕ್ಕಾಗಿ ಕಾಯುತ್ತಿವೆ. ಈ ಪಕ್ಷಗಳು ಸಂಸತ್ತಿನಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ಸಹಾಯ ಮಾಡಿವೆ. ಕಾಂಗ್ರೆಸ್, ಡಿಎಂಕೆ ಮತ್ತು ಎಐಎಂಐಎಂ ಸೇರಿದಂತೆ ವಿರೋಧ ಪಕ್ಷಗಳು ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್