ಹೆಬ್ಬಾವು ತಿಂದ ಹುಲಿ 
ದೇಶ

Rare Wildlife Sighting: ಹೆಬ್ಬಾವು ತಿಂದ ಹುಲಿ.. ಮುಂದೇನಾಯ್ತು?; Pilibhit Tiger Reserveನಲ್ಲಿ ಅಪರೂಪದ ದೃಶ್ಯ

ಸಫಾರಿಗೆ ಆಗಮಿಸಿದ್ದ ಪ್ರವಾಸಿಗರು ಈ ಅಪರೂಪದ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಲಖನೌ: ಹುಲಿ ಅಭಯಾರಣ್ಯದಲ್ಲಿ ಅತಿ ಅಪರೂಪದ ದೃಶ್ಯವೊಂದು ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಲಿಯೊಂದು ಹೆಬ್ಬಾವನ್ನು ತಿಂದ ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ (Uttar Pradesh) ಪಿಲಿಭಿಟ್ ಹುಲಿ ಅಭಯಾರಣ್ಯದಲ್ಲಿ ಈ ಅಪರೂಪದ ಘಟನೆ ನಡೆದಿದ್ದು, ಸಫಾರಿಗೆ ಆಗಮಿಸಿದ್ದ ಪ್ರವಾಸಿಗರು ಈ ಅಪರೂಪದ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಹುಲಿಯೊಂದು ಹೆಬ್ಬಾವನ್ನು ತಿಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿರುವಂತೆ ಕಾಡಿನ ರಸ್ತೆಯಲ್ಲಿ ಬೇಟೆ ಅರಸಿ ಬಂದ ಹುಲಿಯೊಂದು ಆಹಾರಕ್ಕಾಗಿ ಅತ್ತ ಇತ್ತ ನೋಡಿದ್ದು ಈ ವೇಳೆ ರಸ್ತೆ ಬದಿಯಲ್ಲಿ ಹೆಬ್ಬಾವು ಕಂಡಿದೆ. ಹತ್ತಿರ ಹೋಗಿ ನೋಡಿದ ಹುಲಿ ಅದನ್ನು ತನ್ನ ಕಾಲಿನಿಂದ ಸ್ಪರ್ಶ ಮಾಡಿದೆ.

ಅಷ್ಟು ಹೊತ್ತಿಗಾಗಲೇ ಹಾವು ಸತ್ತಿತ್ತು. ಈ ವೇಳೆ ನೋಡ ನೋಡುತ್ತಲೇ ಹುಲಿ ಹಾವನ್ನು ತಿಂದಿದೆ. ಈ ವಿಡಿಯೋದಲ್ಲಿ ಹುಲಿ ಹಾವನ್ನು ತಿನ್ನುವುದನ್ನು ಮಾತ್ರ ತೋರಿಸಲಾಗಿದೆ. ಆ ಹಾವನ್ನು ಹುಲಿಯೇ ಬೇಟೆಯಾಡಿತ್ತಾ ಅಥವಾ ಹಾವು ಮೊದಲೇ ಸತ್ತುಬಿದ್ದಿತ್ತಾ ಎಂಬುದು ಗೊತ್ತಾಗಿಲ್ಲ.

ಹುಲ್ಲು ತಿಂದ ಹುಲಿ

ಅಚ್ಚರಿ ಎಂದರೆ ಹಾವನ್ನು ತಿಂದು ಸ್ವಲ್ಪ ಸಮಯದ ನಂತರ ಹುಲಿ ಹುಲ್ಲನ್ನು ತಿನ್ನತೊಡಗಿತು. ಇದರಿಂದ ಪ್ರವಾಸಿಗರು ಅಚ್ಚರಿಗೊಂಡಿದ್ದು, ಇದಾದ ಕೆಲವೇ ಕ್ಷಣಗಳಲ್ಲಿ ಹುಲಿ ವಾಂತಿ ಮಾಡಿಕೊಳ್ಳಲಾರಂಭಿಸಿತು.

ಸ್ಥಳಕ್ಕೆ ಅಧಿಕಾರಿಗಳ ದೌಡು.. ಹುಲಿ ಆರೋಗ್ಯದ ಕುರಿತು ಮೇಲ್ವಿಚಾರಣೆ

ಇನ್ನು ಈ ವಿಡಿಯೋ ವೈರಲ್ ಆಗುತ್ತಲೇ ಫಿಲಿಬಿಟ್ ಅರಣ್ಯಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಹುಲಿ ಆರೋಗ್ಯದ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT