ನಿಶಿಕಾಂತ್ ದುಬೆ 
ದೇಶ

'ದೇಶದ ಎಲ್ಲಾ ಅಂತರ್ಯುದ್ಧಗಳಿಗೆ CJI ಹೊಣೆ, ಸುಪ್ರೀಂ ಕೋರ್ಟ್ ತನ್ನ ಮಿತಿ ಮೀರುತ್ತಿದೆ': ಬಿಜೆಪಿ ಸಂಸದ

ದೇಶದಲ್ಲಿ ಧಾರ್ಮಿಕ ಸಂಘರ್ಷಗಳನ್ನು ಪ್ರಚೋದಿಸಲು ಸುಪ್ರೀಂ ಕೋರ್ಟ್ ಕಾರಣವಾಗಿದೆ ಎಂದು ನ್ಯಾಯಾಂಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಶನಿವಾರ ಹೇಳಿದ್ದಾರೆ.

ಈ ಕುರಿತು X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ದುಬೆ, ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಬೇಕು ಎಂದು ಬರೆದಿದ್ದರು.

ನಂತರ ANI ಜೊತೆ ಮಾತನಾಡಿದ ದುಬೆ, ದೇಶದಲ್ಲಿ ಧಾರ್ಮಿಕ ಸಂಘರ್ಷಗಳನ್ನು ಪ್ರಚೋದಿಸಲು ಸುಪ್ರೀಂ ಕೋರ್ಟ್ ಕಾರಣವಾಗಿದೆ ಎಂದು ನ್ಯಾಯಾಂಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

"... ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸಲು ಸುಪ್ರೀಂ ಕೋರ್ಟ್ ಹೊಣೆಯಾಗಿದೆ. ಸುಪ್ರೀಂ ಕೋರ್ಟ್ ತನ್ನ ಮಿತಿಗಳನ್ನು ಮೀರುತ್ತಿದೆ. ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯನ್ನು ಮುಚ್ಚಬೇಕು...." ಎಂದು ಬಿಜೆಪಿ ಹೇಳಿದ್ದಾರೆ.

"ಈ ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಅಂತರ್ಯುದ್ಧಗಳಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರೇ ಹೊಣೆ" ಎಂದು ಅವರು ಮುರ್ಷಿದಾಬಾದ್ ಹಿಂಸಾಚಾರದ ಕುರಿತ ಪ್ರಶ್ನೆಗೆ ಬಿಜೆಪಿ ನಾಯಕ ಉತ್ತರಿಸಿದರು.

ಇನ್ನು ದುಬೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮಾಣಿಕಮ್ ಟ್ಯಾಗೋರ್, "ಇದು ಸುಪ್ರೀಂ ಕೋರ್ಟ್ ವಿರುದ್ಧದ ಮಾನಹಾನಿ ಹೇಳಿಕೆಯಾಗಿದೆ. ನಿಶಿಕಾಂತ್ ದುಬೆ ಇತರ ಎಲ್ಲ ಸಂಸ್ಥೆಗಳನ್ನು ನಿರಂತರವಾಗಿ ಕೆಡವುವ ವ್ಯಕ್ತಿ. ಈಗ, ಅವರು ಸುಪ್ರೀಂ ಕೋರ್ಟ್ ಮೇಲೆ ದಾಳಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಇದನ್ನು ಗಮನಕ್ಕೆ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಅವರು ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಸಂಸತ್ತಿನ ಹೊರಗೆ ಮಾತನಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಮೇಲಿನ ಅವರ ದಾಳಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದಿದ್ದಾರೆ.

ಈ ತಿಂಗಳ ಮೊದಲ ವಾರದಲ್ಲಿ ಸಂಸತ್ತು ಅಂಗೀಕರಿಸಿದ ವಕ್ಫ್(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಜಾರ್ಖಂಡ್ ನ ಗೊಡ್ಡಾ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಈ ಹೇಳಿಕೆ ಹೊರಬಿದ್ದಿದೆ.

ರಾಷ್ಟ್ರಪತಿಗಳು ಅಥವಾ ರಾಜ್ಯಪಾಲರು ತಮಗೆ ಕಳುಹಿಸಲಾದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಕಾಲಮಿತಿ ನಿಗದಿಪಡಿಸಿದ್ದು, ಇದಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತೀರ್ಪಿನ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT