ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್  
ದೇಶ

ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತಕ್ಕೆ ಭೇಟಿ; ಆಗ್ರಾದಲ್ಲಿ ಯುಪಿ ಸಿಎಂ ಯೋಗಿ ಸ್ವಾಗತ

ಅಮೆರಿಕದ ಉಪಾಧ್ಯಕ್ಷರು ಏಪ್ರಿಲ್ 21ರ ಸೋಮವಾರ ರಾತ್ರಿ ಜೈಪುರಕ್ಕೆ ಆಗಮಿಸಲಿದ್ದಾರೆ.

ಲಖನೌ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳೊಂದಿಗೆ ಏಪ್ರಿಲ್ 21 ರಿಂದ ನಾಲ್ಕು ದಿನಗಳ ಭಾರತ ಭೇಟಿಗೆ ಆಗಮಿಸುತ್ತಿದ್ದಾರೆ. ವ್ಯಾನ್ಸ್ ಅವರು ದೆಹಲಿಯಲ್ಲಿ ರಾಜಕೀಯ ಸಭೆಗಳಲ್ಲಿ ಭಾಗವಹಿಸುವ ಮೊದಲು ಕುಟುಂಬದೊಂದಿಗೆ ಭಾರತದ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಅಮೆರಿಕದ ಉಪಾಧ್ಯಕ್ಷರು ಏಪ್ರಿಲ್ 21ರ ಸೋಮವಾರ ರಾತ್ರಿ ಜೈಪುರಕ್ಕೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ರಾಜಸ್ಥಾನದ ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ನಂತರ, ವ್ಯಾನ್ಸ್ ಮತ್ತು ಅವರ ಕುಟುಂಬವು ಏಪ್ರಿಲ್ 23 ರಂದು ಆಗ್ರಾಗೆ ಭೇಟಿ ನೀಡಿ ಪ್ರೀತಿಯ ಸ್ಮಾರಕ ತಾಜ್ ಮಹಲ್‌ನ ಸೌಂದರ್ಯವನ್ನು ವೀಕ್ಷಿಸಲಿದ್ದಾರೆ. ನಂತರ ಅಮೆರಿಕದ ಉಪಾಧ್ಯಕ್ಷರು ದ್ವಿಪಕ್ಷೀಯ ಮಾತುಕತೆಗಾಗಿ ದೆಹಲಿಗೆ ತೆರಳಲಿದ್ದಾರೆ.

ಮೂಲಗಳ ಪ್ರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಆಗ್ರಾ ಜಿಲ್ಲಾಡಳಿತವು ಅಮೆರಿಕದ ಉಪಾಧ್ಯಕ್ಷರ ಭೇಟಿಗೆ ಸಿದ್ಧತೆ ನಡೆಸುತ್ತಿದೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಆಗ್ರಾದಲ್ಲಿ ಅಮೆರಿಕದ ಉಪಾಧ್ಯಕ್ಷರನ್ನು ಸ್ವಾಗತಿಸುವ ಸಾಧ್ಯತೆಯಿದೆ. ಗಣ್ಯರ ಭೇಟಿಯ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡಲು ಯುಪಿ ಪ್ರವಾಸೋದ್ಯಮ ಸಚಿವ ರಾಜವೀರ್ ಸಿಂಗ್ ಈಗಾಗಲೇ ಆಗ್ರಾದಲ್ಲಿದ್ದಾರೆ.

ಅಮೆರಿಕ ಉಪಾಧ್ಯಕ್ಷರ ಭೇಟಿಗೂ ಮುನ್ನ ಏಪ್ರಿಲ್ 22, ಮಂಗಳವಾರ ಆಗ್ರಾದಲ್ಲಿ ಯುಎಸ್ ಕಮಾಂಡೋ ಪಡೆಯ ವಿಶೇಷ ತುಕಡಿ ಲ್ಯಾಂಗ್ ಆಗುವ ನಿರೀಕ್ಷೆಯಿದೆ. ಇದಲ್ಲದೆ, ಭದ್ರತೆ ದೃಷ್ಟಿಯಿಂದ ವ್ಯಾನ್ಸ್ ಭೇಟಿಗೆ ಮೂರು ಗಂಟೆಗಳ ಮೊದಲು ತಾಜ್ ಮಹಲ್ ಅನ್ನು ಸಾರ್ವಜನಿಕರಿಗೆ ಬಂದ್ ಮಾಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!