ಡಿಜಿಟಲ್ ಅರೆಸ್ಟ್ (ಸಾಂಕೇತಿಕ ಚಿತ್ರ) online desk
ದೇಶ

ಮಧ್ಯ ಪ್ರದೇಶದಲ್ಲಿ 'ಡಿಜಿಟಲ್ ಅರೆಸ್ಟ್': ಆಧ್ಯಾತ್ಮಿಕ ಸಂಸ್ಥೆಯ ಸಿಬ್ಬಂದಿಗೆ 2.5 ಕೋಟಿ ರೂ ವಂಚನೆ

ಈ ಸಂಬಂಧ ಉಜ್ಜಯಿನಿ ಜಿಲ್ಲೆಯಲ್ಲಿ ಖಾಸಗಿ ಬ್ಯಾಂಕಿನ ಇಬ್ಬರು ಉದ್ಯೋಗಿಗಳು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ.

ಉಜ್ಜಯಿನಿ: ಮಧ್ಯ ಪ್ರದೇಶದಲ್ಲಿ ಧಾರ್ಮಿಕ ಸಂಸ್ಥೆಯ ಸಿಬ್ಬಂದಿಯೊಬ್ಬರನ್ನು "ಅಕ್ರಮ ಹಣ ವರ್ಗಾವಣೆ" ಆರೋಪದ ಮೇಲೆ ಸೈಬರ್ ವಂಚಕರು "ಡಿಜಿಟಲ್ ಅರೆಸ್ಟ್" ಮೂಲಕ 26 ದಿನಗಳಲ್ಲಿ 2.5 ಕೋಟಿ ರೂ. ವರ್ಗಾಯಿಸಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಸಂಬಂಧ ಉಜ್ಜಯಿನಿ ಜಿಲ್ಲೆಯಲ್ಲಿ ಖಾಸಗಿ ಬ್ಯಾಂಕಿನ ಇಬ್ಬರು ಉದ್ಯೋಗಿಗಳು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ.

ಗ್ವಾಲಿಯರ್‌ನ ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಸುಪ್ರದಿಪ್ತಾನಂದ ಅವರು ಏಪ್ರಿಲ್ 16 ರಂದು ತಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಗ್ವಾಲಿಯರ್ ಅಪರಾಧ ವಿಭಾಗದ ಅಧಿಕಾರಿಗಳು ನಾಗ್ಡಾ ಮತ್ತು ಉಜ್ಜಯಿನಿಯಲ್ಲಿನ ಸ್ಥಳಗಳ ಮೇಲೆ ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಂಧಿತ ಆರೋಪಿಗಳು ಆನ್‌ಲೈನ್ ವಂಚನೆ ಜೊತೆಗೆ, ಬ್ಯಾಂಕ್ ಖಾತೆಗಳನ್ನು ಬಾಡಿಗೆಗೆ ನೀಡುವುದು, ನಕಲಿ ಸಿಮ್ ಕಾರ್ಡ್‌ಗಳನ್ನು ವಿತರಿಸುವುದು ಮತ್ತು ಜನರನ್ನು ವಂಚಿಸಲು ಗೇಮಿಂಗ್ ಅಪ್ಲಿಕೇಶನ್‌ಗಳನ್ನು ಬಳಸುವುದರಲ್ಲಿ ಭಾಗಿಯಾಗಿದ್ದಾರೆ ಎಂದು ನಾಗ್ಡಾ ಪೊಲೀಸ್ ಠಾಣೆಯ ಉಸ್ತುವಾರಿ ಎ.ಎಲ್. ಗೌರಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT