ದೇಶ

'ನನ್ನ ಅಸ್ಥಿಯನ್ನು ಚರಂಡಿಗೆ ಎಸೆಯಿರಿ': ಪತ್ನಿ, ಅತ್ತೆ-ಮಾವರಿಂದ ದೌರ್ಜನ್ಯ; ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್!

ಯಾದವ್ ಗುರುವಾರ ಇಟಾವಾ ರೈಲ್ವೆ ನಿಲ್ದಾಣದ ಹೊರಗಿರುವ ಜಾಲಿ ಹೋಟೆಲ್‌ಗೆ ಚೆಕ್ ಇನ್ ಆಗಿದ್ದರು. ಮರುದಿನ ಬೆಳಿಗ್ಗೆ ಅವರು ತಮ್ಮ ಕೊಠಡಿಯಿಂದ ಹೊರಬಂದಿರಲಿಲ್ಲ.

ಲಕ್ನೋ: ಉತ್ತರ ಪ್ರದೇಶದ ಇಟಾವಾದಲ್ಲಿ 33 ವರ್ಷದ ಎಂಜಿನಿಯರ್ ಒಬ್ಬರು ತಮ್ಮ ಪತ್ನಿ ಮತ್ತು ಅತ್ತೆಯ ಮೇಲೆ ಕಿರುಕುಳದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೋಹಿತ್ ಯಾದವ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಅತ್ತೆ-ಮಾವ ಬೆದರಿಕೆಯೊಡ್ಡಿದ್ದಾರೆ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. 'ನನ್ನ ಮರಣದ ನಂತರವೂ ನನಗೆ ನ್ಯಾಯ ಸಿಗದಿದ್ದರೆ, ನನ್ನ ಅಸ್ಥಿಯನ್ನು ಚರಂಡಿಗೆ ಎಸೆಯಿರಿ' ಎಂದು ಅವರು ಹೇಳಿದ್ದಾರೆ.

ಯಾದವ್ ಗುರುವಾರ ಇಟಾವಾ ರೈಲ್ವೆ ನಿಲ್ದಾಣದ ಹೊರಗಿರುವ ಜಾಲಿ ಹೋಟೆಲ್‌ಗೆ ಚೆಕ್ ಇನ್ ಆಗಿದ್ದರು. ಮರುದಿನ ಬೆಳಿಗ್ಗೆ ಅವರು ತಮ್ಮ ಕೊಠಡಿಯಿಂದ ಹೊರಬಂದಿರಲಿಲ್ಲ. ಸಂಜೆ ಕೊಠಡಿಯನ್ನು ಹೋಟೆಲ್ ಸಿಬ್ಬಂದಿ ಪರಿಶೀಲಿಸಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಯ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ.

ಔರೈಯಾ ಜಿಲ್ಲೆಯ ನಿವಾಸಿಯಾದ ಯಾದವ್, ಸಿಮೆಂಟ್ ಕಂಪನಿಯಲ್ಲಿ ಫೀಲ್ಡ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. 2023ರಲ್ಲಿ ಪ್ರಿಯಾ ಎಂಬುವವರನ್ನು ಮದುವೆಯಾಗಿದ್ದರು. ಎರಡು ತಿಂಗಳ ಹಿಂದಷ್ಟೇ ಬಿಹಾರದಲ್ಲಿ ಪ್ರಿಯಾ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಈ ವೇಳೆ ಗರ್ಭಿಣಿಯಾಗಿದ್ದ ಪ್ರಿಯಾರಿಗೆ ಆಕೆಯ ತಾಯಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಯಾದವ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಪ್ರಿಯಾಳ ಆಭರಣಗಳನ್ನು ತನ್ನ ಅತ್ತೆ ಅವರ ಬಳಿ ಇಟ್ಟುಕೊಂಡಿದ್ದರು. ನಾವು ಮದುವೆಯಾದಾಗ ವರದಕ್ಷಿಣೆಗೆ ಬೇಡಿಕೆ ಇಟ್ಟಿರಲಿಲ್ಲ. ಆದರೆ, ನನ್ನ ಪತ್ನಿ ತನ್ನ ಕುಟುಂಬದ ಎಲ್ಲ ಸದಸ್ಯರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

'ನನ್ನ ಮನೆ ಮತ್ತು ಆಸ್ತಿಯನ್ನು ಅವಳ ಹೆಸರಿಗೆ ನೋಂದಾಯಿಸದಿದ್ದರೆ, ನನ್ನ ಕುಟುಂಬವನ್ನು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ನನ್ನ ಹೆಂಡತಿ ನನಗೆ ಬೆದರಿಕೆ ಹಾಕಿದ್ದಳು. ಅವಳ ತಂದೆ ಮನೋಜ್ ಕುಮಾರ್ ಸುಳ್ಳು ದೂರು ದಾಖಲಿಸಿದರು ಮತ್ತು ಅವಳ ಸಹೋದರ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಅಂದಿನಿಂದ, ತನ್ನ ಹೆಂಡತಿ ಪ್ರತಿದಿನ ತನ್ನೊಂದಿಗೆ ಜಗಳವಾಡಲು ಪ್ರಾರಂಭಿಸಿದಳು' ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಈ ವಿಡಿಯೋ ನಿಮಗೆ ಸಿಗುವ ಹೊತ್ತಿಗೆ, ನಾನು ಈ ಲೋಕದಿಂದ ದೂರವಾಗಿರುತ್ತೇನೆ. ಮಹಿಳೆಯರ ಸುಳ್ಳು ಆರೋಪಗಳಿಂದ ಪುರುಷರನ್ನು ರಕ್ಷಿಸುವ ಒಂದು ಕಾನೂನು ಇದ್ದಿದ್ದರೆ ನಾನು ಈ ಹೆಜ್ಜೆ ಇಡುತ್ತಿರಲಿಲ್ಲ. ನನ್ನ ಹೆಂಡತಿ ಮತ್ತು ಆಕೆಯ ಕುಟುಂಬದಿಂದ ಕಿರುಕುಳವನ್ನು ನಾನು ಸಹಿಸಲಾರೆ' ಎಂದಿದ್ದಾರೆ. ತನ್ನ ಹೆತ್ತವರಲ್ಲಿ ಕ್ಷಮೆಯಾಚಿಸಿರುವ ಯಾದವ್, ತನ್ನ ಮರಣದ ನಂತರವೂ ನ್ಯಾಯ ಸಿಗದಿದ್ದರೆ ತನ್ನ ಅಸ್ಥಿಯನ್ನು ಚರಂಡಿಗೆ ಎಸೆಯುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT