ಕಪಿಲ್ ಸಿಬಲ್, ಜಗದೀಪ್ ಧನಕರ್ Photo | PTI
ದೇಶ

"ನ್ಯಾಯಾಲಯ ಹೇಳಿದ ಎಲ್ಲವೂ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ: ಧಂಕರ್ ಗೆ ಕಪಿಲ್ ಸಿಬಲ್ ತಿರುಗೇಟು

ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

ನವದೆಹಲಿ: ಸರ್ವೋಚ್ಛ ನ್ಯಾಯಾಲಯ ಹೇಳಿರುವುದು ಎಲ್ಲವೂ ದೇಶದ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್‌ ವಿರುದ್ಧ ಮಂಗಳವಾರ ಮತ್ತೆ ವಾಗ್ದಾಳಿ ನಡೆಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ತಿರುಗೇಟು ನೀಡಿದ್ದಾರೆ.

ಸಂಸತ್ತೇ ಸರ್ವೋಚ್ಚ. ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ಸರ್ವೋಚ್ಚ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಜಗದೀಪ್ ಧನಕರ್ ಅವರು ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವ ಧನಕರ್, ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ರಾಷ್ಟ್ರದ ಸರ್ವೋಚ್ಚ ಶ್ರೇಷ್ಠ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಹೇಳಿದರು.

ಧನಕರ್ ಹೇಳಿಕೆಗೆ X ಮೂಲಕ ಪ್ರತಿಕ್ರಿಯಿಸಿರುವ ಸಿಬಲ್, "ಸುಪ್ರೀಂ ಕೋರ್ಟ್: ಸಂಸತ್ತು ಕಾನೂನುಗಳನ್ನು ಅಂಗೀಕರಿಸುವ ಪೂರ್ಣ ಅಧಿಕಾರವನ್ನು ಹೊಂದಿವೆ. ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

"ನ್ಯಾಯಾಲಯ ಹೇಳಿದ ಎಲ್ಲವೂ: ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ; ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಟ್ಟಿದೆ" ಎಂದು ಪಕ್ಷೇತರ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT