ಕಪಿಲ್ ಸಿಬಲ್, ಜಗದೀಪ್ ಧನಕರ್ Photo | PTI
ದೇಶ

"ನ್ಯಾಯಾಲಯ ಹೇಳಿದ ಎಲ್ಲವೂ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ: ಧಂಕರ್ ಗೆ ಕಪಿಲ್ ಸಿಬಲ್ ತಿರುಗೇಟು

ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

ನವದೆಹಲಿ: ಸರ್ವೋಚ್ಛ ನ್ಯಾಯಾಲಯ ಹೇಳಿರುವುದು ಎಲ್ಲವೂ ದೇಶದ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್‌ ವಿರುದ್ಧ ಮಂಗಳವಾರ ಮತ್ತೆ ವಾಗ್ದಾಳಿ ನಡೆಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ತಿರುಗೇಟು ನೀಡಿದ್ದಾರೆ.

ಸಂಸತ್ತೇ ಸರ್ವೋಚ್ಚ. ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ಸರ್ವೋಚ್ಚ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಜಗದೀಪ್ ಧನಕರ್ ಅವರು ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವ ಧನಕರ್, ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ರಾಷ್ಟ್ರದ ಸರ್ವೋಚ್ಚ ಶ್ರೇಷ್ಠ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಹೇಳಿದರು.

ಧನಕರ್ ಹೇಳಿಕೆಗೆ X ಮೂಲಕ ಪ್ರತಿಕ್ರಿಯಿಸಿರುವ ಸಿಬಲ್, "ಸುಪ್ರೀಂ ಕೋರ್ಟ್: ಸಂಸತ್ತು ಕಾನೂನುಗಳನ್ನು ಅಂಗೀಕರಿಸುವ ಪೂರ್ಣ ಅಧಿಕಾರವನ್ನು ಹೊಂದಿವೆ. ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

"ನ್ಯಾಯಾಲಯ ಹೇಳಿದ ಎಲ್ಲವೂ: ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ; ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಟ್ಟಿದೆ" ಎಂದು ಪಕ್ಷೇತರ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ