ಕಪಿಲ್ ಸಿಬಲ್, ಜಗದೀಪ್ ಧನಕರ್ Photo | PTI
ದೇಶ

"ನ್ಯಾಯಾಲಯ ಹೇಳಿದ ಎಲ್ಲವೂ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ: ಧಂಕರ್ ಗೆ ಕಪಿಲ್ ಸಿಬಲ್ ತಿರುಗೇಟು

ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

ನವದೆಹಲಿ: ಸರ್ವೋಚ್ಛ ನ್ಯಾಯಾಲಯ ಹೇಳಿರುವುದು ಎಲ್ಲವೂ ದೇಶದ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್‌ ವಿರುದ್ಧ ಮಂಗಳವಾರ ಮತ್ತೆ ವಾಗ್ದಾಳಿ ನಡೆಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ತಿರುಗೇಟು ನೀಡಿದ್ದಾರೆ.

ಸಂಸತ್ತೇ ಸರ್ವೋಚ್ಚ. ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ಸರ್ವೋಚ್ಚ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಜಗದೀಪ್ ಧನಕರ್ ಅವರು ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವ ಧನಕರ್, ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ರಾಷ್ಟ್ರದ ಸರ್ವೋಚ್ಚ ಶ್ರೇಷ್ಠ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಹೇಳಿದರು.

ಧನಕರ್ ಹೇಳಿಕೆಗೆ X ಮೂಲಕ ಪ್ರತಿಕ್ರಿಯಿಸಿರುವ ಸಿಬಲ್, "ಸುಪ್ರೀಂ ಕೋರ್ಟ್: ಸಂಸತ್ತು ಕಾನೂನುಗಳನ್ನು ಅಂಗೀಕರಿಸುವ ಪೂರ್ಣ ಅಧಿಕಾರವನ್ನು ಹೊಂದಿವೆ. ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

"ನ್ಯಾಯಾಲಯ ಹೇಳಿದ ಎಲ್ಲವೂ: ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ; ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಟ್ಟಿದೆ" ಎಂದು ಪಕ್ಷೇತರ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT