ಮಮತಾ ಬ್ಯಾನರ್ಜಿ 
ದೇಶ

ಶಿಕ್ಷಕರ ಉದ್ಯೋಗ ಭದ್ರತೆ ಬಗ್ಗೆ ಸರ್ಕಾರ 'ಕಾಳಜಿ ವಹಿಸುತ್ತದೆ': ಮಮತಾ; 'ಪೊಳ್ಳು ಭರವಸೆ' ಎಂದ ಪ್ರತಿಭಟನಾಕಾರರು

ಸೋಮವಾರ ಸಂಜೆ 6 ಗಂಟೆಯೊಳಗೆ ಕಳಂಕರಹಿತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಮತ್ತು ಅರ್ಹ ಶಿಕ್ಷಕರನ್ನು ಗುರುತಿಸಲು ವಿಫಲವಾದ ನಂತರ ಎಸ್‌ಎಸ್‌ಸಿ ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಕೋಲ್ಕತ್ತಾ: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಶಿಕ್ಷಕರು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಪ್ರಧಾನ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಉದ್ಯೋಗ ಭದ್ರತೆಯ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಭರವಸೆ ನೀಡಿದ್ದಾರೆ. ಆದರೆ ಇದು 'ಪೊಳ್ಳು ಭರವಸೆ' ಎಂದು ಪ್ರತಿಭಟನಾನಿರತ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸಂಜೆ 6 ಗಂಟೆಯೊಳಗೆ ಕಳಂಕರಹಿತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಮತ್ತು ಅರ್ಹ ಶಿಕ್ಷಕರನ್ನು ಗುರುತಿಸಲು ವಿಫಲವಾದ ನಂತರ ಎಸ್‌ಎಸ್‌ಸಿ ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ, ಹಿಂದಿನ ದಿನ, ಪ್ರತಿಭಟನಾ ನಿರತ ಶಿಕ್ಷಕರು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದರು ಮತ್ತು ತಮ್ಮ ಸರ್ಕಾರ ನಿಮ್ಮ ಉದ್ಯೋಗವನ್ನು ರಕ್ಷಿಸುತ್ತದೆ ಎಂದು ಭರವಸೆ ನೀಡಿದರು.

"ಯಾರು ಕಳಂಕಿತರು ಮತ್ತು ಯಾರು ಕಳಂಕ ರಹಿತರು ಎಂಬ ಬಗ್ಗೆ ನೀವು ಚಿಂತಿಸಬೇಕಾಗಿಲ್ಲ. ನಿಮಗೆ ನಿಮ್ಮ ಕೆಲಸವಿದೆಯೇ ಮತ್ತು ನೀವು ನಿಮ್ಮ ಸಂಬಳವನ್ನು ಸಮಯಕ್ಕೆ ಪಡೆಯುತ್ತಿದ್ದೀರಾ ಎಂಬುದರ ಬಗ್ಗೆ ಮಾತ್ರ ಯೋಚಿಸಿ. ಕಳಂಕಿತ ಮತ್ತು ಕಳಂಕರಹಿತ ಶಿಕ್ಷಕರನ್ನು ಗುರುತಿಸುವ ಪಟ್ಟಿ ಸರ್ಕಾರ ಮತ್ತು ನ್ಯಾಯಾಲಯದಲ್ಲಿ ಉಳಿದಿದೆ" ಎಂದು ಮಮತಾ ಬ್ಯಾನರ್ಜಿ ಮಿಡ್ನಾಪುರದಲ್ಲಿ ನಡೆದ ಆಡಳಿತಾತ್ಮಕ ಕಾರ್ಯಕ್ರಮದಲ್ಲಿ ಹೇಳಿದ್ದರು.

"ನಿಮ್ಮ ಉದ್ಯೋಗ ಸದ್ಯಕ್ಕೆ ಸುರಕ್ಷಿತವಾಗಿದೆ ಮತ್ತು ನಿಮಗೆ ಸಂಬಳ ಸಿಗುತ್ತದೆ ಎಂದು ನಾವು ಭರವಸೆ ನೀಡುತ್ತೇವೆ. ದಯವಿಟ್ಟು ನಿಮ್ಮ ಶಾಲೆಗಳಿಗೆ ಹಿಂತಿರುಗಿ ಮತ್ತು ತರಗತಿಗಳನ್ನು ಪುನರಾರಂಭಿಸಿ. ನಿನ್ನೆ ರಾತ್ರಿಯಿಂದ ನಾನು ಇದರ ಬಗ್ಗೆ ಹಲವಾರು ಬಾರಿ ಮಾತನಾಡಿದ್ದೇನೆ. ನಾವು ನಿಮ್ಮೊಂದಿಗಿದ್ದೇವೆ" ಎಂದು ಸಿಎಂ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT