ಮಮತಾ ಬ್ಯಾನರ್ಜಿ 
ದೇಶ

ಶಿಕ್ಷಕರ ಉದ್ಯೋಗ ಭದ್ರತೆ ಬಗ್ಗೆ ಸರ್ಕಾರ 'ಕಾಳಜಿ ವಹಿಸುತ್ತದೆ': ಮಮತಾ; 'ಪೊಳ್ಳು ಭರವಸೆ' ಎಂದ ಪ್ರತಿಭಟನಾಕಾರರು

ಸೋಮವಾರ ಸಂಜೆ 6 ಗಂಟೆಯೊಳಗೆ ಕಳಂಕರಹಿತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಮತ್ತು ಅರ್ಹ ಶಿಕ್ಷಕರನ್ನು ಗುರುತಿಸಲು ವಿಫಲವಾದ ನಂತರ ಎಸ್‌ಎಸ್‌ಸಿ ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಕೋಲ್ಕತ್ತಾ: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಶಿಕ್ಷಕರು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಪ್ರಧಾನ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಉದ್ಯೋಗ ಭದ್ರತೆಯ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಭರವಸೆ ನೀಡಿದ್ದಾರೆ. ಆದರೆ ಇದು 'ಪೊಳ್ಳು ಭರವಸೆ' ಎಂದು ಪ್ರತಿಭಟನಾನಿರತ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸಂಜೆ 6 ಗಂಟೆಯೊಳಗೆ ಕಳಂಕರಹಿತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಮತ್ತು ಅರ್ಹ ಶಿಕ್ಷಕರನ್ನು ಗುರುತಿಸಲು ವಿಫಲವಾದ ನಂತರ ಎಸ್‌ಎಸ್‌ಸಿ ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ, ಹಿಂದಿನ ದಿನ, ಪ್ರತಿಭಟನಾ ನಿರತ ಶಿಕ್ಷಕರು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದರು ಮತ್ತು ತಮ್ಮ ಸರ್ಕಾರ ನಿಮ್ಮ ಉದ್ಯೋಗವನ್ನು ರಕ್ಷಿಸುತ್ತದೆ ಎಂದು ಭರವಸೆ ನೀಡಿದರು.

"ಯಾರು ಕಳಂಕಿತರು ಮತ್ತು ಯಾರು ಕಳಂಕ ರಹಿತರು ಎಂಬ ಬಗ್ಗೆ ನೀವು ಚಿಂತಿಸಬೇಕಾಗಿಲ್ಲ. ನಿಮಗೆ ನಿಮ್ಮ ಕೆಲಸವಿದೆಯೇ ಮತ್ತು ನೀವು ನಿಮ್ಮ ಸಂಬಳವನ್ನು ಸಮಯಕ್ಕೆ ಪಡೆಯುತ್ತಿದ್ದೀರಾ ಎಂಬುದರ ಬಗ್ಗೆ ಮಾತ್ರ ಯೋಚಿಸಿ. ಕಳಂಕಿತ ಮತ್ತು ಕಳಂಕರಹಿತ ಶಿಕ್ಷಕರನ್ನು ಗುರುತಿಸುವ ಪಟ್ಟಿ ಸರ್ಕಾರ ಮತ್ತು ನ್ಯಾಯಾಲಯದಲ್ಲಿ ಉಳಿದಿದೆ" ಎಂದು ಮಮತಾ ಬ್ಯಾನರ್ಜಿ ಮಿಡ್ನಾಪುರದಲ್ಲಿ ನಡೆದ ಆಡಳಿತಾತ್ಮಕ ಕಾರ್ಯಕ್ರಮದಲ್ಲಿ ಹೇಳಿದ್ದರು.

"ನಿಮ್ಮ ಉದ್ಯೋಗ ಸದ್ಯಕ್ಕೆ ಸುರಕ್ಷಿತವಾಗಿದೆ ಮತ್ತು ನಿಮಗೆ ಸಂಬಳ ಸಿಗುತ್ತದೆ ಎಂದು ನಾವು ಭರವಸೆ ನೀಡುತ್ತೇವೆ. ದಯವಿಟ್ಟು ನಿಮ್ಮ ಶಾಲೆಗಳಿಗೆ ಹಿಂತಿರುಗಿ ಮತ್ತು ತರಗತಿಗಳನ್ನು ಪುನರಾರಂಭಿಸಿ. ನಿನ್ನೆ ರಾತ್ರಿಯಿಂದ ನಾನು ಇದರ ಬಗ್ಗೆ ಹಲವಾರು ಬಾರಿ ಮಾತನಾಡಿದ್ದೇನೆ. ನಾವು ನಿಮ್ಮೊಂದಿಗಿದ್ದೇವೆ" ಎಂದು ಸಿಎಂ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT