ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಅಪ್ರಾಪ್ತ ಬಾಲಕಿ ಅಪಹರಿಸಿ, ಅರಣ್ಯ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ

ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು.

ರೂರ್ಕೆಲಾ: ಮೂವರು ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಹಳ್ಳಿಯ ರಸ್ತೆಯಿಂದ ವಾಹನದಲ್ಲಿ ಅಪಹರಿಸಿ, ಒಡಿಶಾದ ರೂರ್ಕೆಲಾದಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ತಲ್ಸಾರಾ ಪ್ರದೇಶದ ಕಾಡಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು ಮತ್ತು ಅವರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಏಪ್ರಿಲ್ 21 ರಂದು ತಡರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂತ್ರಸ್ತ ಬಾಲಕಿ ಇತರ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ತಮ್ಮ ಮನೆಗಳಿಗೆ ನಡೆದುಕೊಂಡು ಹೋಗುತ್ತಿದ್ದಾರೆ ಅಪಹರಿಸಿದ್ದಾರೆ ಎಂದು ಸುಂದರಗಢ ಎಸ್ಪಿ ಪ್ರತ್ಯೂಷ್ ದಿವಾಕರ್ ಅವರು ಹೇಳಿದ್ದಾರೆ.

ಇಬ್ಬರು ಯುವಕರು ಮತ್ತು ಇಬ್ಬರು ಬಾಲಕಿಯರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಂತ್ರಸ್ತ ಬಾಲಕಿಯನ್ನು ಬಲವಂತವಾಗಿ ವಾಹನದಲ್ಲಿ ಕರೆದೊಯ್ಯಲಾಯಿತು ಎಂದು ದಿವಾಕರ್ ತಿಳಿಸಿದ್ದಾರೆ.

ನಂತರ, ಹತ್ತಿರದ ಕಾಡಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ನಿರ್ಜನ ಸ್ಥಳದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಶೀಘ್ರದಲ್ಲೇ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ ಮತ್ತು ಅದರ ಆಧಾರದ ಮೇಲೆ ಹೆಚ್ಚಿನ ತನಿಖೆ ಮುಂದುವರಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಅಪರಾಧಿಗಳಲ್ಲಿ ಇಬ್ಬರು ವಯಸ್ಕರು ಎಂದು ಕಂಡುಬಂದಿದ್ದರೂ, ಮೂರನೇ ಅಪರಾಧಿ(17) ಅಪ್ರಾಪ್ತ ವಯಸ್ಕ ಎಂದು ಹೇಳಿಕೊಂಡಿದ್ದಾರೆ. ಅವರ ನಿಜವಾದ ವಯಸ್ಸಿನ ಪರಿಶೀಲನೆ ನಡೆಯುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!