ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಅಪ್ರಾಪ್ತ ಬಾಲಕಿ ಅಪಹರಿಸಿ, ಅರಣ್ಯ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ

ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು.

ರೂರ್ಕೆಲಾ: ಮೂವರು ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಹಳ್ಳಿಯ ರಸ್ತೆಯಿಂದ ವಾಹನದಲ್ಲಿ ಅಪಹರಿಸಿ, ಒಡಿಶಾದ ರೂರ್ಕೆಲಾದಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ತಲ್ಸಾರಾ ಪ್ರದೇಶದ ಕಾಡಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು ಮತ್ತು ಅವರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಏಪ್ರಿಲ್ 21 ರಂದು ತಡರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂತ್ರಸ್ತ ಬಾಲಕಿ ಇತರ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ತಮ್ಮ ಮನೆಗಳಿಗೆ ನಡೆದುಕೊಂಡು ಹೋಗುತ್ತಿದ್ದಾರೆ ಅಪಹರಿಸಿದ್ದಾರೆ ಎಂದು ಸುಂದರಗಢ ಎಸ್ಪಿ ಪ್ರತ್ಯೂಷ್ ದಿವಾಕರ್ ಅವರು ಹೇಳಿದ್ದಾರೆ.

ಇಬ್ಬರು ಯುವಕರು ಮತ್ತು ಇಬ್ಬರು ಬಾಲಕಿಯರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಂತ್ರಸ್ತ ಬಾಲಕಿಯನ್ನು ಬಲವಂತವಾಗಿ ವಾಹನದಲ್ಲಿ ಕರೆದೊಯ್ಯಲಾಯಿತು ಎಂದು ದಿವಾಕರ್ ತಿಳಿಸಿದ್ದಾರೆ.

ನಂತರ, ಹತ್ತಿರದ ಕಾಡಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ನಿರ್ಜನ ಸ್ಥಳದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಶೀಘ್ರದಲ್ಲೇ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ ಮತ್ತು ಅದರ ಆಧಾರದ ಮೇಲೆ ಹೆಚ್ಚಿನ ತನಿಖೆ ಮುಂದುವರಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಅಪರಾಧಿಗಳಲ್ಲಿ ಇಬ್ಬರು ವಯಸ್ಕರು ಎಂದು ಕಂಡುಬಂದಿದ್ದರೂ, ಮೂರನೇ ಅಪರಾಧಿ(17) ಅಪ್ರಾಪ್ತ ವಯಸ್ಕ ಎಂದು ಹೇಳಿಕೊಂಡಿದ್ದಾರೆ. ಅವರ ನಿಜವಾದ ವಯಸ್ಸಿನ ಪರಿಶೀಲನೆ ನಡೆಯುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT