ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು 
ದೇಶ

Pahalgam attack: ಪ್ರವಾಸಿಗರಿಗಾಗಿ 24/7 ತುರ್ತು ಸಹಾಯವಾಣಿ ಆರಂಭ

ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮಂಗಳವಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ.

"ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24x7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಅನ್ನು ಸಂಪರ್ಕಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಭಯೋತ್ಪಾದಕರು, ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ 27ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾಚಿಕೆಗೇಡಿನ ಸಂಗತಿ'; ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್

MP: ಗಣರಾಜ್ಯೋತ್ಸವದಂದು ತಟ್ಟೆಗಳ ಬದಲಿಗೆ ಹಾಳೆಗಳ ಮೇಲೆ ಮಕ್ಕಳಿಗೆ ಉಪಹಾರ, ಶಿಕ್ಷಣ ವ್ಯವಸ್ಥೆಗೆ ನಾಚಿಕೆಗೇಡು!

U19 ವಿಶ್ವಕಪ್: ಜಿಂಬಾಬ್ವೆ ತಂಡವನ್ನು 204 ರನ್ ಗಳಿಂದ ಮಣಿಸಿದ ಭಾರತ; ಸೂಪರ್ ಸಿಕ್ಸ್‌ನಲ್ಲಿ ನಂಬರ್ 1 ಸ್ಥಾನ!

ಉಡುಪಿ: ದೋಣಿ ಮುಳುಗಿ ಮೂವರು ಪ್ರವಾಸಿಗರು ಸಾವು; ಜಿಲ್ಲಾಡಳಿತದಿಂದ ಸುರಕ್ಷತಾ ಕ್ರಮ

FTA ಗೆ ಸಹಿ ಬೆನ್ನಲ್ಲೇ ಮಹತ್ವದ ಘೋಷಣೆ: ಭಾರತದಲ್ಲಿ ಮೊದಲ ಲೀಗಲ್ ಗೇಟ್‌ವೇ ಕಚೇರಿ ತೆರೆಯಲಿರುವ EU

SCROLL FOR NEXT