ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ 
ದೇಶ

ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ, 12 ಪ್ರವಾಸಿಗರಿಗೆ ಗಾಯ

ಗುಂಡಿನ ಸದ್ದು ಕೇಳಿಬಂದ ನಂತರ, ಭದ್ರತಾ ಪಡೆಗಳು ಪಹಲ್ಗಾಮ್ ಪ್ರವಾಸಿ ಪಟ್ಟಣದ ಬೈಸರನ್ ಹುಲ್ಲುಗಾವಲುಗಳಿಗೆ ಧಾವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 12 ಪ್ರವಾಸಿಗರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೈಸರನ್‌ನಲ್ಲಿ ಈ ದಾಳಿ ನಡೆದಿದೆ. ಇದು ಕಾಲ್ನಡಿಗೆ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದಾದ ಹುಲ್ಲುಗಾವಲು ಪ್ರದೇಶವಾಗಿದ್ದು, ಇಂದು ಬೆಳಿಗ್ಗೆ ಪ್ರವಾಸಿಗರ ಗುಂಪೊಂದು ಅಲ್ಲಿಗೆ ಭೇಟಿ ನೀಡಿತ್ತು ಎಂದು ಅವರು ಹೇಳಿದರು.

ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಅಪರಿಚಿತ ಬಂದೂಕುಧಾರಿಗಳು ಪ್ರವಾಸಿಗರ ಮೇಲೆ ಹತ್ತಿರದಿಂದಲೇ ಗುಂಡು ಹಾರಿಸಿದರು. ಇದರ ಪರಿಣಾಮವಾಗಿ ಹಲವಾರು ಜನರು ಗಾಯಗೊಂಡರು ಎಂದಿದ್ದಾರೆ.

'ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ನನ್ನ ಗಂಡನ ತಲೆಗೆ ಗುಂಡು ತಗುಲಿದೆ ಮತ್ತು ಇತರ ಏಳು ಜನರು ಗಾಯಗೊಂಡಿದ್ದಾರೆ' ಸಂತ್ರಸ್ತ ಮಹಿಳೆಯೊಬ್ಬರು ಫೋನ್ ಮೂಲಕ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಆ ಮಹಿಳೆ ಯಾರೆಂಬುದು ಪತ್ತೆಯಾಗದಿದ್ದರೂ, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಸಹಾಯ ಮಾಡುವಂತೆ ಅಂಗಲಾಚಿದ್ದಾರೆ.

ಗಾಯಾಳುಗಳ ಸ್ಥಳಾಂತರಕ್ಕಾಗಿ ಅಧಿಕಾರಿಗಳು ಹೆಲಿಕಾಪ್ಟರ್ ಅನ್ನು ಬಳಿಸಿದ್ದಾರೆ. ಕೆಲವು ಗಾಯಾಳುಗಳನ್ನು ಸ್ಥಳೀಯ ಜನರು ತಮ್ಮ ಕುದುರೆಗಳ ಮೇಲೆ ಹುಲ್ಲುಗಾವಲಿನಿಂದ ಕೆಳಗೆ ಇಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಾಯಗೊಂಡ 12 ಪ್ರವಾಸಿಗರನ್ನು ಅಲ್ಲಿಗೆ ದಾಖಲಿಸಲಾಗಿದ್ದು, ಅವರೆಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಪಹಲ್ಗಾಮ್ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ.

ಗುಂಡಿನ ಸದ್ದು ಕೇಳಿದ ನಂತರ ಭದ್ರತಾ ಪಡೆಗಳು ಪಹಲ್ಗಾಮ್ ಪ್ರವಾಸಿ ಪಟ್ಟಣದ ಬೈಸರನ್ ಹುಲ್ಲುಗಾವಲುಗಳಿಗೆ ಧಾವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT