ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಆಘಾತಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಿದ ಈ ಕೃತ್ಯವನ್ನು ಕ್ಷಮಿಸಲಾಗದು. ಇದು ನಿಸ್ಸಂದೇಹವಾಗಿ ಖಂಡಿಸಬೇಕಾದ ಹೇಯ ಮತ್ತು ಅಮಾನವೀಯ ಕೃತ್ಯ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಅತ್ಯಂತ ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದ್ದಾರೆ.

ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಿದ ಈ ಕೃತ್ಯವನ್ನು ಕ್ಷಮಿಸಲಾಗದು. ಇದು ನಿಸ್ಸಂದೇಹವಾಗಿ ಖಂಡಿಸಬೇಕಾದ ಹೇಯ ಮತ್ತು ಅಮಾನವೀಯ ಕೃತ್ಯವಾಗಿದೆ ಎಂದು ರಾಷ್ಟ್ರಪತಿಗಳು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

"ಮುಗ್ಧ ನಾಗರಿಕರ ಮೇಲೆ, ಈ ಸಂದರ್ಭದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡುವುದು ಸಂಪೂರ್ಣವಾಗಿ ಭಯಾನಕ ಮತ್ತು ಕ್ಷಮಿಸಲಾಗದು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಮುರ್ಮು ಅವರು ಹೇಳಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಭಯೋತ್ಪಾದಕರು, ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT