ಯೋಗ ಗುರು ಬಾಬಾ ರಾಮ್‌ದೇವ್ Photo | PTI
ದೇಶ

ಯೋಗ ಗುರು ಬಾಬಾ ರಾಮ್‌ದೇವ್ 'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ದೆಹಲಿ ಹೈಕೋರ್ಟ್

ಇತ್ತೀಚೆಗಷ್ಟೇ ಪತಂಜಲಿಯ ಗುಲಾಬ್ ಶರಬತ್ ಪ್ರಚಾರದ ವೇಳೆ, ಹಮ್‌ದರ್ದ್ ಅವರ ರೂಹ್ ಅಫ್ಜಾದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ರಾಮದೇವ್ ಹೇಳಿದ್ದರು.

ನವದೆಹಲಿ: ಯೋಗ ಗುರು ಬಾಬಾ ರಾಮ್‌ದೇವ್ ಅವರು ಇತ್ತೀಚೆಗೆ ಹಮ್‌ದರ್ದ್ ಅವರ ರೂಹ್ ಅಫ್ಜಾ ಪಾನೀಯದ ಕುರಿತು ನೀಡಿದ್ದ 'ಶರಬತ್ ಜಿಹಾದ್' ಹೇಳಿಕೆಯು 'ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ಉಂಟು ಮಾಡಿದೆ' ಮತ್ತು ಇಂತಹ ಹೇಳಿಕೆಗಳು ಸಮರ್ಥನೀಯವಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಹಮ್‌ದರ್ದ್ ನ್ಯಾಷನಲ್ ಫೌಂಡೇಶನ್ ಇಂಡಿಯಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಲಿಮಿಟೆಡ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, 'ಈ ಹೇಳಿಕೆಯು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಆಘಾತಗೊಳಿಸುವಂತಿದೆ. ಇಂತಹ ಹೇಳಿಕೆಗಳು ಸಮರ್ಥನೀಯವಲ್ಲ. ಈ ರೀತಿ ಮಾತನಾಡುವಾಗ ಗಮನವಿಟ್ಟುಕೊಳ್ಳುವಂತೆ ನಿಮ್ಮ ಕಕ್ಷಿದಾರರಿಗೆ ಹೇಳಿ. ಇಲ್ಲದಿದ್ದರೆ, ನ್ಯಾಯಾಲಯದಿಂದ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಇತ್ತೀಚೆಗಷ್ಟೇ ಪತಂಜಲಿಯ ಗುಲಾಬ್ ಶರಬತ್ ಪ್ರಚಾರದ ವೇಳೆ, ಹಮ್‌ದರ್ದ್ ಅವರ ರೂಹ್ ಅಫ್ಜಾದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ರಾಮದೇವ್ ಹೇಳಿದ್ದರು. ನಂತರ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ರಾಮದೇವ್, ತಾವು ಯಾವುದೇ ಬ್ರ್ಯಾಂಡ್ ಅಥವಾ ಸಮುದಾಯವನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ ಎಂದಿದ್ದರು.

ಹಮ್‌ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಈ ಪ್ರಕರಣವು ಅವಹೇಳನವನ್ನು ಮೀರಿದ್ದು, ಇದು ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಇದು ದ್ವೇಷ ಭಾಷಣಕ್ಕೆ ಸಮನಾಗಿದೆ. 'ಶರಬತ್ ಜಿಹಾದ್' ಎಂದು ಅವರು ಹೇಳುತ್ತಾರೆ. ಅವರು ಅವರ ವ್ಯವಹಾರವನ್ನು ನೋಡಿಕೊಳ್ಳಲಿ. ನಮಗೇಕೆ ತೊಂದರೆ ನೀಡುತ್ತಿದ್ದಾರೆ?' ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ