ಒಮರ್ ಅಬ್ದುಲ್ಲಾ 
ದೇಶ

ಪೋನಿ ಮ್ಯಾನ್ ದಾಳಿ ತಡೆಯಲು ಯತ್ನಿಸಿದ್ದರೇ? ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಸಿಎಂ ಒಮರ್ ಹೇಳಿದ್ದೇನು?

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹಪತ್ನಾರ್‌ನಲ್ಲಿ ಮೃತ ಸೈಯದ್ ಆದಿಲ್ ಹುಸೇನ್ ಶಾ ಅವರ ಕುಟುಂಬ ಸದಸ್ಯರೊಂದಿಗೆ ಸಿಎಂ ಒಮರ್ ಮಾತನಾಡಿ, ಸಾಂತ್ವನ ಹೇಳಿದರು.

ಶ್ರೀನಗರ: ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪೋನಿ ರೈಡ್ ಆಪರೇಟರ್‌ನ ಅಂತ್ಯಕ್ರಿಯೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬುಧವಾರ ಭಾಗವಹಿಸಿದ್ದರು.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹಪತ್ನಾರ್‌ನಲ್ಲಿ ಮೃತ ಸೈಯದ್ ಆದಿಲ್ ಹುಸೇನ್ ಶಾ ಅವರ ಕುಟುಂಬ ಸದಸ್ಯರೊಂದಿಗೆ ಸಿಎಂ ಒಮರ್ ಮಾತನಾಡಿ, ಸಾಂತ್ವನ ಹೇಳಿದರು ಮತ್ತು ಅವರಿಗೆ ಎಲ್ಲಾ ರೀತಿಯ ಬೆಂಬಲ ನೀಡುವ ಭರವಸೆ ನೀಡಿದರು.

"ಬಹುಶಃ ಸೈಯದ್ ಅವರು ಉಗ್ರರನ್ನು ತಡೆಯಲು ಪ್ರಯತ್ನಿಸಿರಬಹುದು ಮತ್ತು ಭಯೋತ್ಪಾದಕನ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿರಬಹುದು. ಅದಕ್ಕಾಗಿಯೇ ಅವರನ್ನು ಹತ್ಯೆ ಮಾಡಲಾಗಿದೆ" ಎಂದು ಒಮರ್ ಅಬ್ದುಲ್ಲಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

"ನಾವು ಅವರ ಕುಟುಂಬವನ್ನು ನೋಡಿಕೊಳ್ಳಬೇಕು ಮತ್ತು ಅವರಿಗೆ ಸಹಾಯ ಮಾಡಬೇಕು. ಈ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಂತಿದೆ ಮತ್ತು ನಾವು ಅವರಿಗೆ ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ ಎಂದು ಅವರಿಗೆ ಭರವಸೆ ನೀಡಲು ಇಲ್ಲಿಗೆ ಬಂದಿದ್ದೇನೆ" ಎಂದು ಮುಖ್ಯಮಂತ್ರಿ ಹೇಳಿದರು.

ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಏಕೈಕ ಸ್ಥಳೀಯ ವ್ಯಕ್ತಿ ಸೈಯದ್ ಆದಿಲ್ ಆಗಿದ್ದು, ಈ ದಾಳಿಯಲ್ಲಿ ಒಟ್ಟು 26 ಪ್ರವಾಸಿಗರನ್ನು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT