ಒಮರ್ ಅಬ್ದುಲ್ಲಾ 
ದೇಶ

ಪೋನಿ ಮ್ಯಾನ್ ದಾಳಿ ತಡೆಯಲು ಯತ್ನಿಸಿದ್ದರೇ? ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಸಿಎಂ ಒಮರ್ ಹೇಳಿದ್ದೇನು?

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹಪತ್ನಾರ್‌ನಲ್ಲಿ ಮೃತ ಸೈಯದ್ ಆದಿಲ್ ಹುಸೇನ್ ಶಾ ಅವರ ಕುಟುಂಬ ಸದಸ್ಯರೊಂದಿಗೆ ಸಿಎಂ ಒಮರ್ ಮಾತನಾಡಿ, ಸಾಂತ್ವನ ಹೇಳಿದರು.

ಶ್ರೀನಗರ: ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪೋನಿ ರೈಡ್ ಆಪರೇಟರ್‌ನ ಅಂತ್ಯಕ್ರಿಯೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬುಧವಾರ ಭಾಗವಹಿಸಿದ್ದರು.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹಪತ್ನಾರ್‌ನಲ್ಲಿ ಮೃತ ಸೈಯದ್ ಆದಿಲ್ ಹುಸೇನ್ ಶಾ ಅವರ ಕುಟುಂಬ ಸದಸ್ಯರೊಂದಿಗೆ ಸಿಎಂ ಒಮರ್ ಮಾತನಾಡಿ, ಸಾಂತ್ವನ ಹೇಳಿದರು ಮತ್ತು ಅವರಿಗೆ ಎಲ್ಲಾ ರೀತಿಯ ಬೆಂಬಲ ನೀಡುವ ಭರವಸೆ ನೀಡಿದರು.

"ಬಹುಶಃ ಸೈಯದ್ ಅವರು ಉಗ್ರರನ್ನು ತಡೆಯಲು ಪ್ರಯತ್ನಿಸಿರಬಹುದು ಮತ್ತು ಭಯೋತ್ಪಾದಕನ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿರಬಹುದು. ಅದಕ್ಕಾಗಿಯೇ ಅವರನ್ನು ಹತ್ಯೆ ಮಾಡಲಾಗಿದೆ" ಎಂದು ಒಮರ್ ಅಬ್ದುಲ್ಲಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

"ನಾವು ಅವರ ಕುಟುಂಬವನ್ನು ನೋಡಿಕೊಳ್ಳಬೇಕು ಮತ್ತು ಅವರಿಗೆ ಸಹಾಯ ಮಾಡಬೇಕು. ಈ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಂತಿದೆ ಮತ್ತು ನಾವು ಅವರಿಗೆ ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ ಎಂದು ಅವರಿಗೆ ಭರವಸೆ ನೀಡಲು ಇಲ್ಲಿಗೆ ಬಂದಿದ್ದೇನೆ" ಎಂದು ಮುಖ್ಯಮಂತ್ರಿ ಹೇಳಿದರು.

ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಏಕೈಕ ಸ್ಥಳೀಯ ವ್ಯಕ್ತಿ ಸೈಯದ್ ಆದಿಲ್ ಆಗಿದ್ದು, ಈ ದಾಳಿಯಲ್ಲಿ ಒಟ್ಟು 26 ಪ್ರವಾಸಿಗರನ್ನು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ