ವಿನಯ್ ನರ್ವಾಲ್ ದಂಪತಿ 
ದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿ: 5 ದಿನಗಳ ಹಿಂದೆ ವಿವಾಹ; ಹನಿಮೂನ್ ಗೆ ತೆರಳಿದ್ದ ನೌಕಾಪಡೆ ಅಧಿಕಾರಿ ಬಲಿ

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶ್ಮೀರಕ್ಕೆ ತೆರಳಿದ್ದರು.

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ನಂತರ ಅಲ್ಪ ರಜೆಗಾಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ವಿವಾಹ ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನರ್ವಾಲ್ ಕೇವಲ ಎರಡು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದರು ಮತ್ತು ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಅವರ ಸಾವು ಅವರ ಕುಟುಂಬಕ್ಕೆ ಆಘಾತ ಬಡಿದಂತಾಗಿದೆ. ಅವರು 4 ದಿನಗಳ ಹಿಂದೆ ವಿವಾಹವಾಗಿದ್ದರು. ಎಲ್ಲರೂ ಸಂತೋಷವಾಗಿದ್ದರು. ಅವರನ್ನು ಭಯೋತ್ಪಾದಕರು ಕೊಂದಿದ್ದಾರೆ, ಅವರು ಸ್ಥಳದಲ್ಲೇ ನಿಧನರಾದರು ಎಂಬ ಮಾಹಿತಿ ನಮಗೆ ಬಂದಿದೆ ಎಂದು ಹೇಳಿದ್ದಾರೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಲವಾರು ರಾಜಕೀಯ ನಾಯಕರು ದಾಳಿಯನ್ನು ಖಂಡಿಸಿದ್ದಾರೆ. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ರಾಜ್ಯದ ಹಲವಾರು ಸ್ಥಳಗಳಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT