ವಿನಯ್ ನರ್ವಾಲ್ ದಂಪತಿ 
ದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿ: 5 ದಿನಗಳ ಹಿಂದೆ ವಿವಾಹ; ಹನಿಮೂನ್ ಗೆ ತೆರಳಿದ್ದ ನೌಕಾಪಡೆ ಅಧಿಕಾರಿ ಬಲಿ

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶ್ಮೀರಕ್ಕೆ ತೆರಳಿದ್ದರು.

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ನಂತರ ಅಲ್ಪ ರಜೆಗಾಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ವಿವಾಹ ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನರ್ವಾಲ್ ಕೇವಲ ಎರಡು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದರು ಮತ್ತು ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಅವರ ಸಾವು ಅವರ ಕುಟುಂಬಕ್ಕೆ ಆಘಾತ ಬಡಿದಂತಾಗಿದೆ. ಅವರು 4 ದಿನಗಳ ಹಿಂದೆ ವಿವಾಹವಾಗಿದ್ದರು. ಎಲ್ಲರೂ ಸಂತೋಷವಾಗಿದ್ದರು. ಅವರನ್ನು ಭಯೋತ್ಪಾದಕರು ಕೊಂದಿದ್ದಾರೆ, ಅವರು ಸ್ಥಳದಲ್ಲೇ ನಿಧನರಾದರು ಎಂಬ ಮಾಹಿತಿ ನಮಗೆ ಬಂದಿದೆ ಎಂದು ಹೇಳಿದ್ದಾರೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಲವಾರು ರಾಜಕೀಯ ನಾಯಕರು ದಾಳಿಯನ್ನು ಖಂಡಿಸಿದ್ದಾರೆ. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ರಾಜ್ಯದ ಹಲವಾರು ಸ್ಥಳಗಳಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!