IB ಅಧಿಕಾರಿ ಮನೀಶ್ ರಂಜನ್  ಸಾಂದರ್ಭಿಕ ಚಿತ್ರ
ದೇಶ

ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿ: IB ಅಧಿಕಾರಿಯ ಬಯಕೆ ಕೊನೆಗೂ ಈಡೇರಲಿಲ್ಲ!

ಅವರ ತಂದೆ ಇತ್ತೀಚೆಗೆ ಜಾಲ್ಡಾದ ಹಿಂದಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು. ಈ ರಜೆಯ ನಂತರ ರಂಜನ್ ತನ್ನ ಪೋಷಕರನ್ನು ವೈಷ್ಣೋದೇವಿಗೆ ಕರೆದೊಯ್ಯಲು ಯೋಜಿಸಿದ್ದರು

ರಾಂಚಿ: ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ಜನರ ಪೈಕಿ ಹೈದರಾಬಾದ್‌ನಲ್ಲಿ ನಿಯೋಜಿಸಲಾದ ಐಬಿಯ ಸೆಕ್ಷನ್ ಆಫೀಸರ್ ಮನೀಶ್ ರಂಜನ್ ಕೂಡ ಸೇರಿದ್ದಾರೆ.

ಈ ರಜೆಯಿಂದ ಹಿಂದಿರುಗಿದ ನಂತರ ತನ್ನ ಪೋಷಕರನ್ನು ವೈಷ್ಣೋದೇವಿ ದೇಗುಲಕ್ಕೆ ಕರೆದೊಯ್ಯಲು ಯೋಜಿಸಿದ್ದರು ಎಂದು ಅವರ ಸ್ನೇಹಿತರೊಬ್ಬರು ವಿವರಿಸಿದ್ದಾರೆ. ರಂಜನ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು ಎಂದು ಗುರುವಾರ ಬೆಳಗ್ಗೆ ರಾಂಚಿ ವಿಮಾನ ನಿಲ್ದಾಣದಲ್ಲಿ ರಂಜನ್ ಅವರ ಪಾರ್ಥಿವ ಶರೀರವನ್ನು ಸ್ವೀಕರಿಸಲು ಬಂದಿದ್ದ ಸಂಜೀವ್ ಕುಮಾರ್ ಗುಪ್ತಾ ಹೇಳಿದರು.

"ಅವರ ತಂದೆ ಇತ್ತೀಚೆಗೆ ಜಾಲ್ಡಾದ ಹಿಂದಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು. ಈ ರಜೆಯ ನಂತರ ರಂಜನ್ ತನ್ನ ಪೋಷಕರನ್ನು ವೈಷ್ಣೋದೇವಿಗೆ ಕರೆದೊಯ್ಯಲು ಯೋಜಿಸಿದ್ದರು. ಇಂತಹ ಭೀಕರ ಘಟನೆ ನಡೆಯುತ್ತದೆ ಎಂದು ನಾವು ಎಂದಿಗೂ ಭಾವಿಸಿರಲಿಲ್ಲ ಎಂದು ಅವರು ತಿಳಿಸಿದರು.

ಜನರು ಭಯೋತ್ಪಾದಕರಿಗೆ ಧರ್ಮವಿಲ್ಲ ಎಂದು ಹೇಳುತ್ತಾರೆ, ಆದರೆ ಅವರ ಧರ್ಮದ ಕಾರಣದಿಂದ ಅಮಾಯಕರನ್ನು ಬರ್ಬರವಾಗಿ ಕೊಲ್ಲಲಾಗಿದೆ ಎಂದು ಮತ್ತೊಬ್ಬ ಸ್ನೇಹಿತ ಆದಿತ್ಯ ಶರ್ಮಾ ಹೇಳಿದರು,

ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ನಾಯಕರು ಮತ್ತು ಆಡಳಿತಾಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ರಂಜನ್ ಅವರಿಗೆ ಗೌರವ ಸಲ್ಲಿಸಿದರು. ಧರ್ಮದ ಆಧಾರದಲ್ಲಿ ಅಮಾಯಕರನ್ನು ಹತ್ಯೆಗೈದ ರೀತಿ ಕ್ಷಮಾಪಣೆಯಲ್ಲ ಎಂದು ಮರಾಂಡಿ ಹೇಳಿದರು. ಅಪರಾಧ ಎಸಗಿದ ಅಪರಾಧಿಗಳಿಗೆ ಸರಕಾರದಿಂದ ನ್ಯಾಯ ದೊರಕಿಸಿಕೊಡಲಾಗುವುದು. ದಾಳಿಯ ಮಾಸ್ಟರ್‌ಮೈಂಡ್‌ಗಳನ್ನು ಸಹ ಬಿಡುವುದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT