ಶೈಲೇಶ್ ಕಲಾಥಿಯಾ 
ದೇಶ

Pahalgam attack: ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ; ಉಗ್ರರ ಗುಂಡಿಗೆ ಬಲಿಯಾದ ಶೈಲೇಶ್ ಕಲಾಥಿಯಾ ಪತ್ನಿ ರೋಧನ!

ಇನ್ನೂ ಆಘಾತದಲ್ಲಿರುವ ಶೀತಲ್, ಸಿನಿಮಾಗಳಲ್ಲಿ ಮಾತ್ರ ಹೀಗೆ ನಡೆಯುವುದನ್ನು ನೋಡಿದ್ದೆ. ಆದರೆ, ಇದನ್ನು ನಿಜ ಜೀವನದಲ್ಲಿ ನೋಡಿದಾಗ ಸಾಕಷ್ಟು ದು:ಖವಾಯಿತು ಎಂದರು.

ಸೂರತ್: ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದಾಗ ಒಬ್ಬನೇ ಒಬ್ಬ ಭದ್ರತಾ ಸಿಬ್ಬಂದಿಯೂ ಇರಲಿಲ್ಲ ಎಂದು ದಾಳಿಯಲ್ಲಿ ಬಲಿಯಾದ ಉತ್ತರ ಪ್ರದೇಶದ ಶೈಲೇಶ್ ಕಲಾಥಿಯಾ ಅವರ ಪತ್ನಿ ಶೀತಲ್ ಕಲಥಿಯಾ ಹೇಳಿದ್ದಾರೆ.

ಭೀಕರ ಘಟನೆ ಕುರಿತು ಸುದ್ದಿಗಾರರೊಂದಿಗೆ ಕಣ್ಣೀರಿಟ್ಟು ಮಾತನಾಡಿದ ಅವರು, ಮಿನಿ ಸ್ವಿಟ್ಜರ್ಲೆಂಡ್‌ನ ತುದಿಯನ್ನು ತಲುಪಿದಾಗ ಎರಡು ಬಾರಿ ಗುಂಡಿನ ಸದ್ದು ಕೇಳಿತು. ತಕ್ಷಣ ಅಲ್ಲಿದ್ದವರು ಓಡಲು ಶುರು ಮಾಡಿದರು. ನಮ್ಮನ್ನು ಸುತ್ತುವರೆದ ಉಗ್ರರು, ಮುಸ್ಲಿಂ ಪುರುಷರಿಂದ ಹಿಂದೂ ವ್ಯಕ್ತಿಗಳು ಬೇರೆಯಾಗಲು ಹೇಳಿದರು. ನಾವೆಲ್ಲಾ ಮೌನವಾಗಿದ್ದೆವು. ಅವರು ಹೋಗ್ತಾರೆ ಅಂದುಕೊಂಡಿದ್ದೇವು. ಆದರೆ, ಒಂದೇ ಒಂದು ಸೆಕೆಂಡ್ ನಲ್ಲಿ ಎಲ್ಲವೂ ಮುಗಿಯಿತು. ಅವರೆಲ್ಲರೂ ಸಾಯುವುದನ್ನು ಅವರು ನೋಡಿದರು. ನಾನು ಏನು ಮಾಡಲು ಸಾಧ್ಯವಾಗಿಲಿಲ್ಲ ಎಂದು ತಿಳಿಸಿದರು.

ಇನ್ನೂ ಆಘಾತದಲ್ಲಿರುವ ಶೀತಲ್, ಸಿನಿಮಾಗಳಲ್ಲಿ ಮಾತ್ರ ಹೀಗೆ ನಡೆಯುವುದನ್ನು ನೋಡಿದ್ದೆ. ಆದರೆ, ಇದನ್ನು ನಿಜ ಜೀವನದಲ್ಲಿ ನೋಡಿದಾಗ ಸಾಕಷ್ಟು ದು:ಖವಾಯಿತು ಎಂದರು.

ಅಲ್ಲಿ ಒಬ್ಬನೇ ಒಬ್ಬ ಭದ್ರತಾ ಸಿಬ್ಬಂದಿ ಇರಲಿಲ್ಲ. ಇದು ಅತ್ಯಂತ ಆಘಾತಕಾರಿ ವಿಷಯವಾಗಿದೆ. ಅಂತಹ ಪ್ರದೇಶಗಳಲ್ಲಿ ಉಗ್ರರ ಅಪಾಯದ ಬಗ್ಗೆ ತಿಳಿದಿದ್ದರೆ, ಭದ್ರತಾ ಸಿಬ್ಬಂದಿ ಯಾರನ್ನೂ ಅಲ್ಲಿಗೆ ಹೋಗಲು ಬಿಡಬಾರದು ಎಂದು ಅವರು ಹೇಳಿದರು. "ನನ್ನ ತಂದೆ, ನನ್ನ ತಾಯಿ ಮತ್ತು ನನ್ನ ಸಹೋದರಿ ಸೇರಿದಂತೆ ನಾವು ನಾಲ್ವರು ಹೋಗಿದ್ದೇವೆ" ಎಂದು ಉಗ್ರರ ಗುಂಡಿಗೆ ಬಲಿಯಾದ ಮೃತರ ಪುತ್ರ ನಕ್ಷ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT