ಅಟಾರಿ ಗಡಿಯಲ್ಲಿ ಪಾಕ್ ನಿಂದ ಮರಳಿದ ಭಾರತೀಯರು  
ದೇಶ

ಪುಣೆ: 111 ಪಾಕ್ ಪ್ರಜೆಗಳು ಎರಡು ದಿನಗಳಲ್ಲಿ ಭಾರತ ತೊರೆಯುವಂತೆ ಸೂಚನೆ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ.

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 111 ಪಾಕಿಸ್ತಾನಿ ಪ್ರಜೆಗಳಿಗೆ ಏ. 27 ರೊಳಗೆ ಭಾರತವನ್ನು ತೊರೆಯುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ.

ಆದರೆ ವೈದ್ಯಕೀಯ ವೀಸಾಗಳು ಹೆಚ್ಚುವರಿಯಾಗಿ ಎರಡು ದಿನಗಳವರೆಗೆ ಮಾನ್ಯವಾಗಿರುತ್ತವೆ. ವೀಸಾ ನೀಡುವ ಕೇಂದ್ರಗಳು ಮತ್ತು ಪಾಸ್‌ಪೋರ್ಟ್ ಕಚೇರಿಯಿಂದ ಪಾಕಿಸ್ತಾನಿ ಪ್ರಜೆಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಸುದ್ದಿಗಾರರಿಗೆ ತಿಳಿಸಿದರು.

"ಇದುವರೆಗೆ 111 ಪಾಕಿಸ್ತಾನಿ ಪ್ರಜೆಗಳ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರೆಲ್ಲರೂ ನಿಗದಿತ ಗಡುವಿನೊಳಗೆ ದೇಶ ತೊರೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ವೀಸಾಗಳನ್ನು ನೀಡಲಾಗಿದ್ದು, ‘ವೈದ್ಯಕೀಯ ಕಾರಣಕ್ಕಾಗಿ ಇಲ್ಲಿರುವವರು ಏಪ್ರಿಲ್ 29 ರೊಳಗೆ ಹೊರಡಲು ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ಮಧ್ಯೆ ಛತ್ರಪತಿ ಸಂಭಾಜಿನಗರದ ಪೊಲೀಸರು 57 ಪಾಕಿಸ್ತಾನಿ ಪ್ರಜೆಗಳು ದೀರ್ಘಾವಧಿಯ ವೀಸಾದಲ್ಲಿ ನಗರದಲ್ಲಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ಸೂಚನೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ ಕಾಯುತ್ತಿರುವುದಾಗಿ ಜಿಲ್ಲಾ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ