ಮೇಧಾ ಪಾಟ್ಕರ್  
ದೇಶ

ದೆಹಲಿ ಲೆ.ಗವರ್ನರ್ ವಿ.ಕೆ ಸಕ್ಸೇನಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ಬಂಧನ

ವಿ ಕೆ ಸಕ್ಸೇನಾ ಅವರು ರಾಷ್ಟ್ರೀಯ ನಾಗರಿಕ ಸ್ವಾತಂತ್ರ್ಯ ಮಂಡಳಿಯ ನೇತೃತ್ವ ವಹಿಸಿದ್ದಾಗ ಮೇಧಾ ಪಾಟ್ಕರ್ ಅವರು ನವೆಂಬರ್ 24, 2000 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಕೇಸು ಇದಾಗಿದೆ.

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ದಾಖಲಿಸಿದ್ದ 23 ವರ್ಷಗಳ ಹಿಂದಿನ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನ ನಾಯಕಿ ಮೇಧಾ ಪಾಟ್ಕರ್ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ದೆಹಲಿ ಪೊಲೀಸರು ಶುಕ್ರವಾರ ಅವರನ್ನು ಬಂಧಿಸಿದ್ದಾರೆ.

ವಿ ಕೆ ಸಕ್ಸೇನಾ ಅವರು ರಾಷ್ಟ್ರೀಯ ನಾಗರಿಕ ಸ್ವಾತಂತ್ರ್ಯ ಮಂಡಳಿಯ ನೇತೃತ್ವ ವಹಿಸಿದ್ದಾಗ ಮೇಧಾ ಪಾಟ್ಕರ್ ಅವರು ನವೆಂಬರ್ 24, 2000 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಕೇಸು ಇದಾಗಿದೆ.

ಅದರಲ್ಲಿ, ಮೇಧಾ ಪಾಟ್ಕರ್ ವಿ ಕೆ ಸಕ್ಸೇನಾ ಅವರನ್ನು ಹೇಡಿ ಎಂದು ಕರೆದು ಹವಾಲಾ ವಹಿವಾಟಿನಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ. ಗುಜರಾತ್‌ನ ಜನರು ಮತ್ತು ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡಮಾನ ಇಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕಳೆದ ವರ್ಷ ಮ್ಯಾಜಿಸ್ಟರಿಯಲ್ ನ್ಯಾಯಾಲಯ, ಈ ಹೇಳಿಕೆಗಳು ಮಾನನಷ್ಟಕರ ಮತ್ತು ನಕಾರಾತ್ಮಕ ಸಾರ್ವಜನಿಕ ಭಾವನೆಯನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ ಎಂದು ತೀರ್ಪು ನೀಡಿದೆ.

ಕಳೆದ ವರ್ಷ, ಮೇ 24 ರಂದು, ನ್ಯಾಯಾಲಯವು ಅವರನ್ನು ಮಾನನಷ್ಟದ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಿತು. ಅವರ ಹೇಳಿಕೆಗಳು ಸಕ್ಸೇನಾ ಅವರ ವೈಯಕ್ತಿಕ ಸಮಗ್ರತೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಅವರ ಪಾತ್ರದ ಮೇಲೆ ನೇರ ದಾಳಿಯಾಗಿದೆ ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವರಿಗೆ ED ಶಾಕ್‌; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ !

US-Iran ಸಂಘರ್ಷ ತಾರಕಕ್ಕೆ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್‌ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಮತ್ತಷ್ಟು ಉಲ್ಬಣ..!

West Asia Conflict: ಇರಾನ್ ಆರ್ಥಿಕ ಬೆನ್ನೆಲುಬಿಗೆ ಅಮೆರಿಕ ಪೆಟ್ಟು: ಸಮುದ್ರದ ಮಧ್ಯದಲ್ಲೇ 5 ಬೃಹತ್ ತೈಲ ಹಡಗುಗಳು ಗುರಿಯಾಗಿಸಿ ದಾಳಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ..!

West Asia Conflict ಎಫೆಕ್ಟ್: ಗಗನಕ್ಕೇರುತ್ತಿದೆ ಜಾಗತಿಕ ತೈಲ ದರ, $100 ತಲುಪಿದ ಕಚ್ಚಾ ತೈಲ ಬೆಲೆ..!

'ಬ್ರಿಟನ್ ತೊರೆಯದಂತೆ ಕಾನೂನುಬದ್ಧ ನಿರ್ಬಂಧ, ಭಾರತ ಸರ್ಕಾರದಿಂದ ನನಗೆ ಅನ್ಯಾಯವಾಗಿದೆ': ವಿಜಯ್ ಮಲ್ಯ