ಸಾಂದರ್ಭಿಕ ಚಿತ್ರ  
ದೇಶ

ತಿರುವನಂತಪುರ: ಹಲವು ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಇಮೇಲ್

ಬಾಂಬ್ ಬೆದರಿಕೆ ಬಂದ ಎಲ್ಲಾ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ತಿರುವನಂತಪುರ: ಕೇರಳ ರಾಜ್ಯ ರಾಜಧಾನಿಯ ವಿವಿಧ ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ಘಟಕಗಳು ಮತ್ತು ಶ್ವಾನ ದಳಗಳನ್ನು ನಿಯೋಜಿಸಿ ತಪಾಸಣೆ ನಡೆಸಿದ್ದಾರೆ.

ಬಾಂಬ್ ಬೆದರಿಕೆ ಬಂದ ಎಲ್ಲಾ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇಲ್ಲಿಯವರೆಗೆ ಏನೂ ಪತ್ತೆಯಾಗಿಲ್ಲ. ತಪಾಸಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ತಿರುವನಂತಪುರ ನಗರದ ಹೃದಯಭಾಗದಲ್ಲಿರುವ ಹಿಲ್ಟನ್ ಹೋಟೆಲ್ ಸೇರಿದಂತೆ ವಿವಿಧ ಹೋಟೆಲ್‌ಗಳಲ್ಲಿ ಐಇಡಿ ಸ್ಫೋಟಗಳು ಸಂಭವಿಸುತ್ತವೆ ಎಂದು ಹೇಳಲಾದ ಬೆದರಿಕೆ ಇಮೇಲ್‌ನ ಮೂಲವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ, ರಾಜ್ಯಾದ್ಯಂತ ಜಿಲ್ಲಾ ಕಲೆಕ್ಟರೇಟ್‌ಗಳು ಮತ್ತು ಕಂದಾಯ ವಿಭಾಗೀಯ ಅಧಿಕಾರಿಗಳ ಕಚೇರಿಗಳಿಗೆ ಮತ್ತು ಇತ್ತೀಚೆಗೆ ಕೇರಳ ಹೈಕೋರ್ಟ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ವ್ಯಾಪಕ ತಪಾಸಣೆ ನಡೆಸಿದ ನಂತರ ಈ ಎಲ್ಲಾ ಬೆದರಿಕೆಗಳನ್ನು ಪೊಲೀಸರು ಹುಸಿಕರೆ ಎಂದು ತಳ್ಳಿಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT