ಮಮತಾ ಬ್ಯಾನರ್ಜಿ PTI
ದೇಶ

ಪಹಲ್ಗಾಮ್, ಉಧಂಪುರ ದಾಳಿ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ಮಮತಾ

ನಾಡಿಯಾ ಜಿಲ್ಲೆಯ ತೆಹಟ್ಟಾದ ಹುತಾತ್ಮ ಯೋಧ ಹವಾಲ್ದಾರ್ ಝಂಟು ಅಲಿ ಶೇಖ್ ಅವರ ಪತ್ನಿಗೆ ರಾಜ್ಯ ಸರ್ಕಾರ ಉದ್ಯೋಗವನ್ನು ನೀಡಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಕೋಲ್ಕತ್ತಾ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ರಾಜ್ಯದ ಮೂವರ ಕುಟುಂಬಗಳಿಗೆ ಮತ್ತು ಉಧಂಪುರ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಘೋಷಿಸಿದ್ದಾರೆ.

ನಾಡಿಯಾ ಜಿಲ್ಲೆಯ ತೆಹಟ್ಟಾದ ಹುತಾತ್ಮ ಯೋಧ ಹವಾಲ್ದಾರ್ ಝಂಟು ಅಲಿ ಶೇಖ್ ಅವರ ಪತ್ನಿಗೆ ರಾಜ್ಯ ಸರ್ಕಾರ ಉದ್ಯೋಗವನ್ನು ನೀಡಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಪಹಲ್ಗಾಮ್ ಸಂತ್ರಸ್ತರಲ್ಲಿ ಒಬ್ಬರಾದ ಬಿಟಾನ್ ಅಧಿಕಾರಿ ಅವರ ತಂದೆಗೆ ರಾಜ್ಯ ಸರ್ಕಾರವು 10,000 ರೂ. ಪಿಂಚಣಿ ನೀಡಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

"ಮಾಸಿಕ 10,000 ರೂ. ಪಿಂಚಣಿಯನ್ನು ಅಧಿಕಾರಿಯ ತಂದೆಗೆ ನೀಡಲಾಗುವುದು. ಕುಟುಂಬಕ್ಕೆ ಬರುವ 10 ಲಕ್ಷ ರೂ. ಪರಿಹಾರವನ್ನು ಸಮಾನವಾಗಿ ಹಂಚಲಾಗುತ್ತದೆ, 5 ಲಕ್ಷ ರೂ. ಅವರ ಪತ್ನಿಗೆ ಮತ್ತು 5 ಲಕ್ಷ ರೂ. ಅವರ ಪೋಷಕರಿಗೆ ಹೋಗುತ್ತದೆ" ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT