ಮಮತಾ ಬ್ಯಾನರ್ಜಿ PTI
ದೇಶ

ಪಹಲ್ಗಾಮ್, ಉಧಂಪುರ ದಾಳಿ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ಮಮತಾ

ನಾಡಿಯಾ ಜಿಲ್ಲೆಯ ತೆಹಟ್ಟಾದ ಹುತಾತ್ಮ ಯೋಧ ಹವಾಲ್ದಾರ್ ಝಂಟು ಅಲಿ ಶೇಖ್ ಅವರ ಪತ್ನಿಗೆ ರಾಜ್ಯ ಸರ್ಕಾರ ಉದ್ಯೋಗವನ್ನು ನೀಡಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಕೋಲ್ಕತ್ತಾ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ರಾಜ್ಯದ ಮೂವರ ಕುಟುಂಬಗಳಿಗೆ ಮತ್ತು ಉಧಂಪುರ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಘೋಷಿಸಿದ್ದಾರೆ.

ನಾಡಿಯಾ ಜಿಲ್ಲೆಯ ತೆಹಟ್ಟಾದ ಹುತಾತ್ಮ ಯೋಧ ಹವಾಲ್ದಾರ್ ಝಂಟು ಅಲಿ ಶೇಖ್ ಅವರ ಪತ್ನಿಗೆ ರಾಜ್ಯ ಸರ್ಕಾರ ಉದ್ಯೋಗವನ್ನು ನೀಡಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಪಹಲ್ಗಾಮ್ ಸಂತ್ರಸ್ತರಲ್ಲಿ ಒಬ್ಬರಾದ ಬಿಟಾನ್ ಅಧಿಕಾರಿ ಅವರ ತಂದೆಗೆ ರಾಜ್ಯ ಸರ್ಕಾರವು 10,000 ರೂ. ಪಿಂಚಣಿ ನೀಡಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

"ಮಾಸಿಕ 10,000 ರೂ. ಪಿಂಚಣಿಯನ್ನು ಅಧಿಕಾರಿಯ ತಂದೆಗೆ ನೀಡಲಾಗುವುದು. ಕುಟುಂಬಕ್ಕೆ ಬರುವ 10 ಲಕ್ಷ ರೂ. ಪರಿಹಾರವನ್ನು ಸಮಾನವಾಗಿ ಹಂಚಲಾಗುತ್ತದೆ, 5 ಲಕ್ಷ ರೂ. ಅವರ ಪತ್ನಿಗೆ ಮತ್ತು 5 ಲಕ್ಷ ರೂ. ಅವರ ಪೋಷಕರಿಗೆ ಹೋಗುತ್ತದೆ" ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT