ಕ್ಷಿಪಣಿ ಪರೀಕ್ಷೆ 
ದೇಶ

Anytime Anywhere: ಶತ್ರು ರಾಷ್ಟ್ರಗಳ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆ ಯಶಸ್ವಿ!

ಭಾರತೀಯ ನೌಕಾಪಡೆಯು ಯಾವುದೇ ಕ್ಷಣ, ಎಲ್ಲಿಯೇ ಆದರೂ ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ, ಭವಿಷ್ಯಕ್ಕೆ ಸಿದ್ಧವಾಗಿದೆ ಎಂದು ಹೇಳಿದೆ.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಶತ್ರು ರಾಷ್ಟ್ರಗಳ ಹಡಗುಗಳನ್ನು ಉಡಾಯಿಸಬಲ್ಲಾ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಅದರ ದೀರ್ಘ-ಶ್ರೇಣಿಯ ನಿಖರ ದಾಳಿಯ ಸಾಮರ್ಥ್ಯವನ್ನು ಪ್ರದರ್ಶಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕ್ಷಿಪಣಿ ಪರೀಕ್ಷೆಯ ದೃಶ್ಯಗಳನ್ನು ಹಂಚಿಕೊಂಡಿರುವ ನೌಕಪಡೆ, ದೀರ್ಘ ಶ್ರೇಣಿಯ ನಿಖರ ಆಕ್ರಮಣಕ್ಕಾಗಿ ಬಹು ಹಂತದ ವಿರೋಧಿ ಹಡಗುಗಳನ್ನು ನಾಶಪಡಿಸಬಲ್ಲಾ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ ಎಂದು ತಿಳಿಸಿದೆ.

ಭಾರತೀಯ ನೌಕಾಪಡೆಯು ಯಾವುದೇ ಕ್ಷಣ, ಎಲ್ಲಿಯೇ ಆದರೂ ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ, ಭವಿಷ್ಯಕ್ಕೆ ಸಿದ್ಧವಾಗಿದೆ ಎಂದು ಹೇಳಿದೆ.

ಯುದ್ಧ ನೌಕೆಗಳ ಸಮೂಹದಿಂದ ಬ್ರಹ್ಮೋಸ್ ವಿರೋಧಿ ಹಡುಗು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಉಡಾವಣೆ ಮಾಡುವುದನ್ನು ದೃಶ್ಯಗಳು ತೋರಿಸುತ್ತವೆ. ಇದು ನೌಕಾಪಡೆಯ ಕಾರ್ಯಾಚರಣೆಯ ಪ್ರದರ್ಶನವಾಗಿದೆ.

26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಡುವೆ ಈ ಕ್ಷಿಪಣಿ ದಾಳಿ ನಡೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT