ಕ್ಷಿಪಣಿ ಪರೀಕ್ಷೆ 
ದೇಶ

Anytime Anywhere: ಶತ್ರು ರಾಷ್ಟ್ರಗಳ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆ ಯಶಸ್ವಿ!

ಭಾರತೀಯ ನೌಕಾಪಡೆಯು ಯಾವುದೇ ಕ್ಷಣ, ಎಲ್ಲಿಯೇ ಆದರೂ ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ, ಭವಿಷ್ಯಕ್ಕೆ ಸಿದ್ಧವಾಗಿದೆ ಎಂದು ಹೇಳಿದೆ.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಶತ್ರು ರಾಷ್ಟ್ರಗಳ ಹಡಗುಗಳನ್ನು ಉಡಾಯಿಸಬಲ್ಲಾ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಅದರ ದೀರ್ಘ-ಶ್ರೇಣಿಯ ನಿಖರ ದಾಳಿಯ ಸಾಮರ್ಥ್ಯವನ್ನು ಪ್ರದರ್ಶಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕ್ಷಿಪಣಿ ಪರೀಕ್ಷೆಯ ದೃಶ್ಯಗಳನ್ನು ಹಂಚಿಕೊಂಡಿರುವ ನೌಕಪಡೆ, ದೀರ್ಘ ಶ್ರೇಣಿಯ ನಿಖರ ಆಕ್ರಮಣಕ್ಕಾಗಿ ಬಹು ಹಂತದ ವಿರೋಧಿ ಹಡಗುಗಳನ್ನು ನಾಶಪಡಿಸಬಲ್ಲಾ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ ಎಂದು ತಿಳಿಸಿದೆ.

ಭಾರತೀಯ ನೌಕಾಪಡೆಯು ಯಾವುದೇ ಕ್ಷಣ, ಎಲ್ಲಿಯೇ ಆದರೂ ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ, ಭವಿಷ್ಯಕ್ಕೆ ಸಿದ್ಧವಾಗಿದೆ ಎಂದು ಹೇಳಿದೆ.

ಯುದ್ಧ ನೌಕೆಗಳ ಸಮೂಹದಿಂದ ಬ್ರಹ್ಮೋಸ್ ವಿರೋಧಿ ಹಡುಗು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಉಡಾವಣೆ ಮಾಡುವುದನ್ನು ದೃಶ್ಯಗಳು ತೋರಿಸುತ್ತವೆ. ಇದು ನೌಕಾಪಡೆಯ ಕಾರ್ಯಾಚರಣೆಯ ಪ್ರದರ್ಶನವಾಗಿದೆ.

26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಡುವೆ ಈ ಕ್ಷಿಪಣಿ ದಾಳಿ ನಡೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT